ವನ್ಯಜೀವಿ ಬೇಟೆ: ಕಾಡು ಹಂದಿ ಸಾರು, ಆಮೆ ಸುಕ್ಕಾ ಸಮೇತ ಮೂವರ ಬಂಧನ

ಶಿರಸಿ: ವನ್ಯಜೀವಿಗಳ ಬೇಟೆ ಮತ್ತು ಅವುಗಳ ಮಾಂಸದಿಂದ ಅಡುಗೆ ತಯಾರಿಸುತ್ತಿದ್ದ ಜಾಲದ ಮೇಲೆ ಶಿರಸಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬನವಾಸಿ ವಲಯದ ಎಕ್ಕಂಬಿ ಸಮೀಪದ ಮೂಡೆಬೈಲ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಬನವಾಸಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೂಡೆಬೈಲ್‌ನ ಶಂಕರ ಲಕ್ಷ್ಮಣ ನಾಯ್ಕ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಕಾಡು ಹಂದಿಯ ಸಾರು ಮತ್ತು ಆಮೆಯ ಸುಕ್ಕಾ ತಯಾರಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಡುಹಂದಿ ಮಾಂಸ ಹಾಗೂ ಆಮೆಯ ಮಾಂಸವನ್ನು ಪಾತ್ರೆಗಳ ಸಮೇತ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಂಕರ ಲಕ್ಷ್ಮಣ ನಾಯ್ಕ, ಗಂಗಾಧರ ಗಣಪತಿ ಗೌಡ, ಮತ್ತು ಶಂಕರ ಬೊಮ್ಮು ಗೌಡ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ರವಿ ಮಾದೇವ ಗೌಡ ಮತ್ತು ಗಣಪತಿ ಬೊಮ್ಮು ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬನವಾಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ ಅವರ ನೇತೃತ್ವದ ಉಪವಲಯ ಅಧಿಕಾರಿ ಗಜೇಂದ್ರ ಮೊಗೇರ, ಬಾಲರಾಜ ಡಿ, ಯಶೋಧಾ ನಾಯ್ಕ, ಮಂಜುನಾಥ ಗಂಗಮತ, ಗಸ್ತು ಅರಣ್ಯ ಪಾಲಕರಾದ ಭೋಜು ಚೌಹಾಣ್, ಅಮೃತ್ ಅರಿಬೆಂಚಿ ಕನಕಪ್ಪ ತಳವಾರ, ಮಲ್ಲಿಕಾರ್ಜುನ ಗುದಗಿ, ಮತ್ತು ರಮೇಶ್ ಎಚ್ ಸಿ, ಅರಣ್ಯ ವೀಕ್ಷಕರಾದ ಈಶ್ವರಪ್ಪ ಎಚ್.ಎಸ್ ಹಾಗೂ ಮಂಜುನಾಥ ಜೆ ನಾಯ್ಕ ಹಾಗೂ ಸಿಬ್ಬಂದಿಗಳು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಬೇಟೆಯ ಕುರಿತು ಅರಣ್ಯ ಇಲಾಖೆ ತನಿಖೆ ಮುಂದುವರೆಸಿದೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

7 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

10 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

14 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago