ಶಿರಸಿ: ವನ್ಯಜೀವಿಗಳ ಬೇಟೆ ಮತ್ತು ಅವುಗಳ ಮಾಂಸದಿಂದ ಅಡುಗೆ ತಯಾರಿಸುತ್ತಿದ್ದ ಜಾಲದ ಮೇಲೆ ಶಿರಸಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬನವಾಸಿ ವಲಯದ ಎಕ್ಕಂಬಿ ಸಮೀಪದ ಮೂಡೆಬೈಲ್ನಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಬನವಾಸಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೂಡೆಬೈಲ್ನ ಶಂಕರ ಲಕ್ಷ್ಮಣ ನಾಯ್ಕ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಕಾಡು ಹಂದಿಯ ಸಾರು ಮತ್ತು ಆಮೆಯ ಸುಕ್ಕಾ ತಯಾರಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಡುಹಂದಿ ಮಾಂಸ ಹಾಗೂ ಆಮೆಯ ಮಾಂಸವನ್ನು ಪಾತ್ರೆಗಳ ಸಮೇತ ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಂಕರ ಲಕ್ಷ್ಮಣ ನಾಯ್ಕ, ಗಂಗಾಧರ ಗಣಪತಿ ಗೌಡ, ಮತ್ತು ಶಂಕರ ಬೊಮ್ಮು ಗೌಡ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ರವಿ ಮಾದೇವ ಗೌಡ ಮತ್ತು ಗಣಪತಿ ಬೊಮ್ಮು ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಬನವಾಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ ಅವರ ನೇತೃತ್ವದ ಉಪವಲಯ ಅಧಿಕಾರಿ ಗಜೇಂದ್ರ ಮೊಗೇರ, ಬಾಲರಾಜ ಡಿ, ಯಶೋಧಾ ನಾಯ್ಕ, ಮಂಜುನಾಥ ಗಂಗಮತ, ಗಸ್ತು ಅರಣ್ಯ ಪಾಲಕರಾದ ಭೋಜು ಚೌಹಾಣ್, ಅಮೃತ್ ಅರಿಬೆಂಚಿ ಕನಕಪ್ಪ ತಳವಾರ, ಮಲ್ಲಿಕಾರ್ಜುನ ಗುದಗಿ, ಮತ್ತು ರಮೇಶ್ ಎಚ್ ಸಿ, ಅರಣ್ಯ ವೀಕ್ಷಕರಾದ ಈಶ್ವರಪ್ಪ ಎಚ್.ಎಸ್ ಹಾಗೂ ಮಂಜುನಾಥ ಜೆ ನಾಯ್ಕ ಹಾಗೂ ಸಿಬ್ಬಂದಿಗಳು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಬೇಟೆಯ ಕುರಿತು ಅರಣ್ಯ ಇಲಾಖೆ ತನಿಖೆ ಮುಂದುವರೆಸಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…