ವನ್ಯಜೀವಿ ಬೇಟೆ: ಕಾಡು ಹಂದಿ ಸಾರು, ಆಮೆ ಸುಕ್ಕಾ ಸಮೇತ ಮೂವರ ಬಂಧನ

ಶಿರಸಿ: ವನ್ಯಜೀವಿಗಳ ಬೇಟೆ ಮತ್ತು ಅವುಗಳ ಮಾಂಸದಿಂದ ಅಡುಗೆ ತಯಾರಿಸುತ್ತಿದ್ದ ಜಾಲದ ಮೇಲೆ ಶಿರಸಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬನವಾಸಿ ವಲಯದ ಎಕ್ಕಂಬಿ ಸಮೀಪದ ಮೂಡೆಬೈಲ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಬನವಾಸಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೂಡೆಬೈಲ್‌ನ ಶಂಕರ ಲಕ್ಷ್ಮಣ ನಾಯ್ಕ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಕಾಡು ಹಂದಿಯ ಸಾರು ಮತ್ತು ಆಮೆಯ ಸುಕ್ಕಾ ತಯಾರಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಡುಹಂದಿ ಮಾಂಸ ಹಾಗೂ ಆಮೆಯ ಮಾಂಸವನ್ನು ಪಾತ್ರೆಗಳ ಸಮೇತ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಂಕರ ಲಕ್ಷ್ಮಣ ನಾಯ್ಕ, ಗಂಗಾಧರ ಗಣಪತಿ ಗೌಡ, ಮತ್ತು ಶಂಕರ ಬೊಮ್ಮು ಗೌಡ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ರವಿ ಮಾದೇವ ಗೌಡ ಮತ್ತು ಗಣಪತಿ ಬೊಮ್ಮು ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬನವಾಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ ಅವರ ನೇತೃತ್ವದ ಉಪವಲಯ ಅಧಿಕಾರಿ ಗಜೇಂದ್ರ ಮೊಗೇರ, ಬಾಲರಾಜ ಡಿ, ಯಶೋಧಾ ನಾಯ್ಕ, ಮಂಜುನಾಥ ಗಂಗಮತ, ಗಸ್ತು ಅರಣ್ಯ ಪಾಲಕರಾದ ಭೋಜು ಚೌಹಾಣ್, ಅಮೃತ್ ಅರಿಬೆಂಚಿ ಕನಕಪ್ಪ ತಳವಾರ, ಮಲ್ಲಿಕಾರ್ಜುನ ಗುದಗಿ, ಮತ್ತು ರಮೇಶ್ ಎಚ್ ಸಿ, ಅರಣ್ಯ ವೀಕ್ಷಕರಾದ ಈಶ್ವರಪ್ಪ ಎಚ್.ಎಸ್ ಹಾಗೂ ಮಂಜುನಾಥ ಜೆ ನಾಯ್ಕ ಹಾಗೂ ಸಿಬ್ಬಂದಿಗಳು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಬೇಟೆಯ ಕುರಿತು ಅರಣ್ಯ ಇಲಾಖೆ ತನಿಖೆ ಮುಂದುವರೆಸಿದೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

2 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

2 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

14 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

16 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

16 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

17 hours ago