ವಯನಾಡು ಭೂಕುಸಿತ: ವಯನಾಡು ಕಷ್ಟಕ್ಕೆ ಸ್ಪಂದಿಸಿದ ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್: ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ನೆರವು ನೀಡಿದ ಡಾರ್ಲಿಂಗ್ ಪ್ರಭಾಸ್

ಬಾಹುಬಲಿ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ತೆಲುಗಿನ ನಟ ಪ್ರಭಾಸ್ ಅವರು ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ಗಳನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.

ಇತ್ತೀಚೆಗೆ ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾಷ್ಟು ಆಸ್ತಿ ಪಾಸ್ತಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಕೆಲವು ಗ್ರಾಮಗಳೇ ದುರಂತ ಕಣ್ಮರೆಯಾಗಿವೆ. ಸದ್ಯ ವಯನಾಡಿಗೆ ಅಗತ್ಯ ನೆರವು ಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಟಾರ್‌ ನಟರು ತಮ್ಮ ಕೈಲಾದಷ್ಟು ಆರ್ಥಿಕ ನೆರವು ನೀಡುತ್ತಿದ್ದಾರೆ. ಇದೀಗ ಬಾಹುಬಲಿ ಖ್ಯಾತಿಯ ರೆಬೆಲ್ ಸ್ಟಾರ್ ಪ್ರಭಾಸ್ ಸಹ ವಯನಾಡು ಕಷ್ಟಕ್ಕೆ ಸ್ಪಂದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಭೂಕುಸಿತ ಸಂತ್ರಸ್ತರ ನೆರವಿಗೆ ನಿಂತವರ ಪೈಕಿ ಅತ್ಯಧಿಕ ಹಣ ಸಹಾಯ ಮಾಡಿದ್ದಾರೆ ಎನ್ನಲಾಗಿದೆ.

ವಯನಾಡು ದುರಂತಕ್ಕೆ ಪರಿಹಾರ ಘೋಷಿಸಿದ ಸ್ಟಾರ್ ನಟರಿವರು…

ಪ್ರವಾಹ ಪರಿಹಾರಕ್ಕಾಗಿ ಟಾಲಿವುಡ್ ಮತ್ತು ಕಾಲಿವುಡ್ ನಟರು ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ 1ಕೋಟಿ ದೇಣಿಗೆ ನೀಡಿದ್ದಾರೆ. ಅಲ್ಲು ಅರ್ಜುನ್ 25 ಲಕ್ಷ ರೂ. ಸೂರ್ಯ, ಜ್ಯೋತಿಕಾ ಮತ್ತು ಕಾರ್ತಿ ಒಟ್ಟಾಗಿ 50 ಲಕ್ಷ ರೂ. ರಶ್ಮಿಕಾ ಮಂದಣ್ಣ 10 ಲಕ್ಷ ರೂ. ಕಮಲ್ ಹಾಸನ್ 25 ಲಕ್ಷ ರೂ. ನಯನತಾರಾ, ವಿಘ್ನೇಶ್ ಶಿವನ್ ₹20 ಲಕ್ಷ ದೇಣಿಗೆ ನೀಡಿದ್ದಾರೆ. ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಮತ್ತು ಅವರ ಪುತ್ರ ದುಲ್ಕರ್ ಸಲ್ಮಾನ್ ಕ್ರಮವಾಗಿ 25 ಲಕ್ಷ ಮತ್ತು 15 ಲಕ್ಷ ರೂ. ಫಹಾದ್ ಫಾಸಿಲ್ ಮತ್ತು ಅವರ ಪತ್ನಿ ನಜ್ರಿಯಾ ನಾಜಿಮ್ ಕೂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ತಮಿಳು ನಟ ವಿಕ್ರಮ್ 20 ಲಕ್ಷ‌ ನೀಡಿದ್ದಾರೆ.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

9 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

10 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

15 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

16 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

20 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

21 hours ago