ಬಾಹುಬಲಿ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ತೆಲುಗಿನ ನಟ ಪ್ರಭಾಸ್ ಅವರು ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ಗಳನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.
ಇತ್ತೀಚೆಗೆ ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾಷ್ಟು ಆಸ್ತಿ ಪಾಸ್ತಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಕೆಲವು ಗ್ರಾಮಗಳೇ ದುರಂತ ಕಣ್ಮರೆಯಾಗಿವೆ. ಸದ್ಯ ವಯನಾಡಿಗೆ ಅಗತ್ಯ ನೆರವು ಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಟಾರ್ ನಟರು ತಮ್ಮ ಕೈಲಾದಷ್ಟು ಆರ್ಥಿಕ ನೆರವು ನೀಡುತ್ತಿದ್ದಾರೆ. ಇದೀಗ ಬಾಹುಬಲಿ ಖ್ಯಾತಿಯ ರೆಬೆಲ್ ಸ್ಟಾರ್ ಪ್ರಭಾಸ್ ಸಹ ವಯನಾಡು ಕಷ್ಟಕ್ಕೆ ಸ್ಪಂದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಭೂಕುಸಿತ ಸಂತ್ರಸ್ತರ ನೆರವಿಗೆ ನಿಂತವರ ಪೈಕಿ ಅತ್ಯಧಿಕ ಹಣ ಸಹಾಯ ಮಾಡಿದ್ದಾರೆ ಎನ್ನಲಾಗಿದೆ.
ವಯನಾಡು ದುರಂತಕ್ಕೆ ಪರಿಹಾರ ಘೋಷಿಸಿದ ಸ್ಟಾರ್ ನಟರಿವರು…
ಪ್ರವಾಹ ಪರಿಹಾರಕ್ಕಾಗಿ ಟಾಲಿವುಡ್ ಮತ್ತು ಕಾಲಿವುಡ್ ನಟರು ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ 1ಕೋಟಿ ದೇಣಿಗೆ ನೀಡಿದ್ದಾರೆ. ಅಲ್ಲು ಅರ್ಜುನ್ 25 ಲಕ್ಷ ರೂ. ಸೂರ್ಯ, ಜ್ಯೋತಿಕಾ ಮತ್ತು ಕಾರ್ತಿ ಒಟ್ಟಾಗಿ 50 ಲಕ್ಷ ರೂ. ರಶ್ಮಿಕಾ ಮಂದಣ್ಣ 10 ಲಕ್ಷ ರೂ. ಕಮಲ್ ಹಾಸನ್ 25 ಲಕ್ಷ ರೂ. ನಯನತಾರಾ, ವಿಘ್ನೇಶ್ ಶಿವನ್ ₹20 ಲಕ್ಷ ದೇಣಿಗೆ ನೀಡಿದ್ದಾರೆ. ಮಲಯಾಳಂ ಸೂಪರ್ಸ್ಟಾರ್ ಮಮ್ಮುಟ್ಟಿ ಮತ್ತು ಅವರ ಪುತ್ರ ದುಲ್ಕರ್ ಸಲ್ಮಾನ್ ಕ್ರಮವಾಗಿ 25 ಲಕ್ಷ ಮತ್ತು 15 ಲಕ್ಷ ರೂ. ಫಹಾದ್ ಫಾಸಿಲ್ ಮತ್ತು ಅವರ ಪತ್ನಿ ನಜ್ರಿಯಾ ನಾಜಿಮ್ ಕೂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ತಮಿಳು ನಟ ವಿಕ್ರಮ್ 20 ಲಕ್ಷ ನೀಡಿದ್ದಾರೆ.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…