ವಯನಾಡು ಭೂಕುಸಿತ: ವಯನಾಡು ಕಷ್ಟಕ್ಕೆ ಸ್ಪಂದಿಸಿದ ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್: ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ನೆರವು ನೀಡಿದ ಡಾರ್ಲಿಂಗ್ ಪ್ರಭಾಸ್

ಬಾಹುಬಲಿ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ತೆಲುಗಿನ ನಟ ಪ್ರಭಾಸ್ ಅವರು ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ಗಳನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.

ಇತ್ತೀಚೆಗೆ ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾಷ್ಟು ಆಸ್ತಿ ಪಾಸ್ತಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಕೆಲವು ಗ್ರಾಮಗಳೇ ದುರಂತ ಕಣ್ಮರೆಯಾಗಿವೆ. ಸದ್ಯ ವಯನಾಡಿಗೆ ಅಗತ್ಯ ನೆರವು ಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಟಾರ್‌ ನಟರು ತಮ್ಮ ಕೈಲಾದಷ್ಟು ಆರ್ಥಿಕ ನೆರವು ನೀಡುತ್ತಿದ್ದಾರೆ. ಇದೀಗ ಬಾಹುಬಲಿ ಖ್ಯಾತಿಯ ರೆಬೆಲ್ ಸ್ಟಾರ್ ಪ್ರಭಾಸ್ ಸಹ ವಯನಾಡು ಕಷ್ಟಕ್ಕೆ ಸ್ಪಂದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಭೂಕುಸಿತ ಸಂತ್ರಸ್ತರ ನೆರವಿಗೆ ನಿಂತವರ ಪೈಕಿ ಅತ್ಯಧಿಕ ಹಣ ಸಹಾಯ ಮಾಡಿದ್ದಾರೆ ಎನ್ನಲಾಗಿದೆ.

ವಯನಾಡು ದುರಂತಕ್ಕೆ ಪರಿಹಾರ ಘೋಷಿಸಿದ ಸ್ಟಾರ್ ನಟರಿವರು…

ಪ್ರವಾಹ ಪರಿಹಾರಕ್ಕಾಗಿ ಟಾಲಿವುಡ್ ಮತ್ತು ಕಾಲಿವುಡ್ ನಟರು ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ 1ಕೋಟಿ ದೇಣಿಗೆ ನೀಡಿದ್ದಾರೆ. ಅಲ್ಲು ಅರ್ಜುನ್ 25 ಲಕ್ಷ ರೂ. ಸೂರ್ಯ, ಜ್ಯೋತಿಕಾ ಮತ್ತು ಕಾರ್ತಿ ಒಟ್ಟಾಗಿ 50 ಲಕ್ಷ ರೂ. ರಶ್ಮಿಕಾ ಮಂದಣ್ಣ 10 ಲಕ್ಷ ರೂ. ಕಮಲ್ ಹಾಸನ್ 25 ಲಕ್ಷ ರೂ. ನಯನತಾರಾ, ವಿಘ್ನೇಶ್ ಶಿವನ್ ₹20 ಲಕ್ಷ ದೇಣಿಗೆ ನೀಡಿದ್ದಾರೆ. ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಮತ್ತು ಅವರ ಪುತ್ರ ದುಲ್ಕರ್ ಸಲ್ಮಾನ್ ಕ್ರಮವಾಗಿ 25 ಲಕ್ಷ ಮತ್ತು 15 ಲಕ್ಷ ರೂ. ಫಹಾದ್ ಫಾಸಿಲ್ ಮತ್ತು ಅವರ ಪತ್ನಿ ನಜ್ರಿಯಾ ನಾಜಿಮ್ ಕೂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ತಮಿಳು ನಟ ವಿಕ್ರಮ್ 20 ಲಕ್ಷ‌ ನೀಡಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

6 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

15 hours ago