ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರುಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ ನಾಶವಾಗಿದೆ.
ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…