ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರುಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ ನಾಶವಾಗಿದೆ.
ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…