ವಯನಾಡು ಭೂಕುಸಿತ: 24ಕ್ಕೂ ಹೆಚ್ಚು ಮಂದಿ ಸಾವು: ಮುಂದುವರಿದ ಕಾರ್ಯಾಚರಣೆ

ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು‌ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ  ನಾಶವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯಚರಣೆ ನಡೆಸಲು ತೀರ್ಮಾನಿಸಿ ಸಿದ್ಧತೆ ನಡೆಸಲಾಗಿದೆ. ಹಲವರು ಕಾಡಿನ ಮಧ್ಯೆ ಸಿಲುಕಿಕೊಂಡಿದ್ದು ಕೆಲವರು ಮನೆಯಲ್ಲಿ ತಂಡೋಪತಂಡವಾಗಿ ಸೇರಿಕೊಂಡಿದ್ದಾರೆ. ಅವರಿಗೆಲ್ಲ ಆಹಾರದ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಕಲ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನೆರೆಯಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಣೆ ಮಾಡಲು ಹೆಲಿಕ್ಯಾಪ್ಟರ್ ಬಳಸಲು ತೀರ್ಮಾನಿಸಿ ಹೆಲಿಕ್ಯಾಪ್ಟರ್ ಸ್ಥಳಕ್ಕೆ ದಾವಿಸುತ್ತಿದೆ.

ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 hour ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

11 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

11 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

22 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

23 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago