ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರುಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ ನಾಶವಾಗಿದೆ.
ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…