ವಯನಾಡು ಭೂಕುಸಿತ: 24ಕ್ಕೂ ಹೆಚ್ಚು ಮಂದಿ ಸಾವು: ಮುಂದುವರಿದ ಕಾರ್ಯಾಚರಣೆ

ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು‌ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ  ನಾಶವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯಚರಣೆ ನಡೆಸಲು ತೀರ್ಮಾನಿಸಿ ಸಿದ್ಧತೆ ನಡೆಸಲಾಗಿದೆ. ಹಲವರು ಕಾಡಿನ ಮಧ್ಯೆ ಸಿಲುಕಿಕೊಂಡಿದ್ದು ಕೆಲವರು ಮನೆಯಲ್ಲಿ ತಂಡೋಪತಂಡವಾಗಿ ಸೇರಿಕೊಂಡಿದ್ದಾರೆ. ಅವರಿಗೆಲ್ಲ ಆಹಾರದ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಕಲ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನೆರೆಯಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಣೆ ಮಾಡಲು ಹೆಲಿಕ್ಯಾಪ್ಟರ್ ಬಳಸಲು ತೀರ್ಮಾನಿಸಿ ಹೆಲಿಕ್ಯಾಪ್ಟರ್ ಸ್ಥಳಕ್ಕೆ ದಾವಿಸುತ್ತಿದೆ.

ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

10 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

10 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

10 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

19 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago