ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರುಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ ನಾಶವಾಗಿದೆ.
ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…