ಕೇರಳದ ವಯನಾಡುವಿನಲ್ಲಿ ಭಾರೀ ಮಳೆಯಾಗಿದ್ದು, ಭೀಕರ ಮಳೆಗೆ ಇಂದು ಬೆಳಗ್ಗೆ ಮೆಪ್ಪಾಡಿ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರುಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಕೇರಳದ ಮುಂಡಕೈ ಜಲ ಸ್ಫೋಟ ದುರಂತದ ದೃಶ್ಯಗಳು ಇದೀಗ ಹರಿದು ಬರುತ್ತಿದೆ. ಬೆಳಗಿನ ಜಾವ ಒಂದೂವರೆ ಗಂಟೆಗೆ ಜಲ ಸ್ಫೋಟ ಉಂಟಾಗಿ 500ಕ್ಕೂ ಹೆಚ್ಚು ಜನ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇದೀಗ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ ಅನ್ನು ಬಳಸಲು ಸಿದ್ಧತೆ ನಡೆಸಲಾಗಿದೆ. ನಾಲ್ಕು ವರ್ಷದ ಹಿಂದೆ ಕೊಡಗಿನಲ್ಲಿ ನಡೆದ ದುರಂತಕಿಂತ ಹೆಚ್ಚಾಗಿ ಸೂರಮಲೆಯಲ್ಲಿ ಜಲ ಸ್ಫೋಟ ಉಂಟಾಗಿ ಮುಂಡಕೈ ಪ್ರದೇಶ ಸಂಪೂರ್ಣವಾಗಿ ನಾಶವಾಗಿದೆ.
ಮುಂಡಕೈ ಕೆಳಭಾಗದಲ್ಲಿ ಇದ್ದ ಶಾಲೆ ಕಟ್ಟಡ,ದೇವಾಲ ಯ, ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ವೈನಾಡು ಜಿಲ್ಲೆಯ ವೈತಿರಿ ಪ್ರದೇಶದಲ್ಲಿ ಹಲವು ಹೋಂಸ್ಟೇ ರಿಸರ್ಟ್ ಗಳಿದ್ದು ಭೂಕುಸಿತದಿಂದ ಹಲವು ಹೋಂ ಸ್ಟೇ ಗಳಿಗೂ ಕೂಡ ಈ ಭೂಕುಸಿತದಿಂದ ಅನಾಹುತ ಉಂಟಾಗಿದೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಪ್ರವಾಸಿಗರು ಇಲ್ಲಿ ತಂಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೇನೆ, ಏರ್ಪೋಸ್ ಹಾಗೂ ಎನ್ ಡಿ ಆರ್ ಎಫ್ ತಂಡ ಈಗಾಗಲೇ ಕಾರ್ಯಾಚರಣೆಗೆ ಹೊರಟಿದ್ದು. ಸಂಸದರು ಇಲ್ಲದ ಈ ಜಿಲ್ಲೆಯಲ್ಲಿ ಇದೀಗ ನೇರವಾಗಿ ಪ್ರದಾನ ಮಂತ್ರಿಗಳ ಕಾರ್ಯಾಲಯದಿಂದ ಎಲ್ಲಾ ನೆರವನ್ನು ನೀಡುವುದಾಗಿ ಘೋಷಿಸಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…