ವಯನಾಡು ಭೂ ಕುಸಿತ: ಘಟನಾ ಸ್ಥಳಕ್ಕೆ ವಿಪಕ್ಷ ನಾಯಕ‌ ರಾಹುಲ್ ಗಾಂಧಿ ಭೇಟಿ,‌ ಪರಿಶೀಲನೆ: ಅಲ್ಲಿನ ಪರಿಸ್ಥಿತಿ ಕಣ್ಣಾರೆ ಕಂಡು ‘ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ’ ಎಂದು ಭಾವುಕರಾದ ರಾಹುಲ್ ಗಾಂಧಿ

ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.

ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ” ಎಂದು ಭಾವುಕರಾದರು.

ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.

ಇಲ್ಲಿನ ಪರಿಸ್ಥಿತಿ ನೋಡಲು ನಾವು ಬಂದಿದ್ದೇವೆ. ಇಲ್ಲಿನ ಜನರ ಸಂಕಷ್ಟದ ಸನ್ನಿವೇಶ ನೋಡಿ ಬಹಳ ನೋವಾಗುತ್ತಿದೆ. ತಮ್ಮ ಮನೆ ಹಾಗೂ ಕುಟುಂಬ ಸದಸ್ಯರನ್ನೇ ಕಳೆದುಕೊಂಡು ಜನ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸೂಕ್ತ ಪರಿಹಾರ ಸಿಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ನಂತರ ಘಟನಾ ಸ್ಥಳದಲ್ಲಿ ಹಗಲು – ರಾತ್ರಿ ಎನ್ನದೆ ದಿನವಿಡೀ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಜಿಲ್ಲಾಡಳಿತ, ಸ್ವಯಂ ಸೇವಕರು ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು.

ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago