ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.
ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.
ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…