ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.
ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.
ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…