ವಯನಾಡು ಭೂ ಕುಸಿತ: ಘಟನಾ ಸ್ಥಳಕ್ಕೆ ವಿಪಕ್ಷ ನಾಯಕ‌ ರಾಹುಲ್ ಗಾಂಧಿ ಭೇಟಿ,‌ ಪರಿಶೀಲನೆ: ಅಲ್ಲಿನ ಪರಿಸ್ಥಿತಿ ಕಣ್ಣಾರೆ ಕಂಡು ‘ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ’ ಎಂದು ಭಾವುಕರಾದ ರಾಹುಲ್ ಗಾಂಧಿ

ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.

ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ” ಎಂದು ಭಾವುಕರಾದರು.

ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.

ಇಲ್ಲಿನ ಪರಿಸ್ಥಿತಿ ನೋಡಲು ನಾವು ಬಂದಿದ್ದೇವೆ. ಇಲ್ಲಿನ ಜನರ ಸಂಕಷ್ಟದ ಸನ್ನಿವೇಶ ನೋಡಿ ಬಹಳ ನೋವಾಗುತ್ತಿದೆ. ತಮ್ಮ ಮನೆ ಹಾಗೂ ಕುಟುಂಬ ಸದಸ್ಯರನ್ನೇ ಕಳೆದುಕೊಂಡು ಜನ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸೂಕ್ತ ಪರಿಹಾರ ಸಿಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ನಂತರ ಘಟನಾ ಸ್ಥಳದಲ್ಲಿ ಹಗಲು – ರಾತ್ರಿ ಎನ್ನದೆ ದಿನವಿಡೀ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಜಿಲ್ಲಾಡಳಿತ, ಸ್ವಯಂ ಸೇವಕರು ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು.

ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago