ವಯನಾಡು ಭೂ ಕುಸಿತ: ಘಟನಾ ಸ್ಥಳಕ್ಕೆ ವಿಪಕ್ಷ ನಾಯಕ‌ ರಾಹುಲ್ ಗಾಂಧಿ ಭೇಟಿ,‌ ಪರಿಶೀಲನೆ: ಅಲ್ಲಿನ ಪರಿಸ್ಥಿತಿ ಕಣ್ಣಾರೆ ಕಂಡು ‘ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ’ ಎಂದು ಭಾವುಕರಾದ ರಾಹುಲ್ ಗಾಂಧಿ

ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.

ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ” ಎಂದು ಭಾವುಕರಾದರು.

ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.

ಇಲ್ಲಿನ ಪರಿಸ್ಥಿತಿ ನೋಡಲು ನಾವು ಬಂದಿದ್ದೇವೆ. ಇಲ್ಲಿನ ಜನರ ಸಂಕಷ್ಟದ ಸನ್ನಿವೇಶ ನೋಡಿ ಬಹಳ ನೋವಾಗುತ್ತಿದೆ. ತಮ್ಮ ಮನೆ ಹಾಗೂ ಕುಟುಂಬ ಸದಸ್ಯರನ್ನೇ ಕಳೆದುಕೊಂಡು ಜನ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸೂಕ್ತ ಪರಿಹಾರ ಸಿಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ನಂತರ ಘಟನಾ ಸ್ಥಳದಲ್ಲಿ ಹಗಲು – ರಾತ್ರಿ ಎನ್ನದೆ ದಿನವಿಡೀ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಜಿಲ್ಲಾಡಳಿತ, ಸ್ವಯಂ ಸೇವಕರು ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು.

ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

3 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

13 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

24 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago