ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.
ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.
ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…