ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.
ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.
ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…