ವಯನಾಡ್ ನಲ್ಲಿ ಭಾರೀ ದುರಂತ – ತಡರಾತ್ರಿ ಭೂಕುಸಿತ: 5 ಸಾವು: 400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಕೇರಳದ ವಯನಾಡಿನ ಮೆಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 400ರಷ್ಟು ಮಂದಿ ಭೂಕುಸಿತದಿಂದ ತೊಂದರೆಗೆ ಒಳಗಾಗಿರಬಹದೆಂದು ಶಂಕಿಸಲಾಗುತ್ತಿದೆ.

ದುರಂತದಲ್ಲಿ ಹಲವು ವಾಹನಗಳು ಕೊಚ್ಚಿ ಹೋಗಿವೆ. ಚುರಲ್ಮಲಾ ಪಟ್ಟಣದ ಒಂದು ಭಾಗ ಕೊಚ್ಚಿ ಹೋಗಿದೆ. ಭೂಕುಸಿತದ ನಂತರ ಗುಡ್ಡದ ಪ್ರವಾಹದಲ್ಲಿ ಹಲವು ಮನೆಗಳು ನಾಶವಾಗಿವೆ. ವೆಲ್ಲರ್ಮಲಾ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಭೂಕುಸಿತದಿಂದ ಭಾರೀ ಹಾನಿಯಾಗಿದೆ. ವಯನಾಡು ಮೆಪ್ಪಾಡಿ ಮುಂಡಕ್ಕೆ ಪ್ರದೇಶದಲ್ಲಿ ಇಷ್ಟು ದೊಡ್ಡ ಅನಾಹುತ ಈ ಹಿಂದೆ ಸಂಭವಿಸಿರಲಿಲ್ಲ.

ಮುಂಡಕೈಯಲ್ಲಿ ಬೆಳಗಿನ ಜಾವ ಒಂದು ಗಂಟೆಗೆ ಮತ್ತು ನಂತರ ಬೆಳಗಿನ ಜಾವ ನಾಲ್ಕು ಗಂಟೆಗೆ ಎರಡು ಬಾರಿ ಭೂಕುಸಿತ ಸಂಭವಿಸಿದೆ. ಮಧ್ಯರಾತ್ರಿ ಭೂಕುಸಿತದ ನಂತರ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಮತ್ತೊಂದು ಭೂಕುಸಿತ ಸಂಭವಿಸಿದೆ 400 ಕ್ಕೂ ಹೆಚ್ಚು ಕುಟುಂಬಗಳು ಭೂಕುಸಿತದಿಂದ ಹಾನಿಗೊಳಗಾದವು. ಹಲವರು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಲವು ಮಂದಿ ನಾಪತ್ತೆಯಾಗಿರುವುದರಿಂದ ಕುಟುಂಬಸ್ಥರಿಂದ ಸಹಾಯಕ್ಕಾಗಿ ಮನವಿಗಳೂ ಬರುತ್ತಿವೆ. ನಾಪತ್ತೆಯಾದವರ ಪತ್ತೆ ಕಾರ್ಯ ಮುಂದುವರಿದಿದ್ದು, ಕಂದಾಯ ಸಚಿವ ಕೆ.ರಾಜನ್, ಸಚಿವ ಒ.ಆ‌ರ್.ಕೇಲು ಮತ್ತಿತರರು ವಯನಾಡಿಗೆ ಮರಳಿದ್ದಾರೆ..

ಎನ್‌ಡಿಆರ್‌ಎಫ್‌ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ. ಏತನ್ಮಧ್ಯೆ ಅನಾಹುತದ ನಿಖರ ಚಿತ್ರಣ ಇನ್ನಷ್ಟೇ ಸಿಗಬೇಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಂದಾಯ ಸಚಿವ ಕೆ.ರಾಜನ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಪಘಾತದಲ್ಲಿ 16 ಮಂದಿ ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೇತುವೆ ಕುಸಿದು ಬಿದ್ದಿರುವುದರಿಂದ ಅಟ್ಟಮಲ, ಚುರಲ್ಮಳಕ್ಕೆ ತೆರಳಲು ಜನರು ಪರದಾಡುವಂತಾಗಿದೆ. ಅಟ್ಟಮಲ ಮತ್ತು ಚುರಲ್‌ಮಳದ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಕೊನೆ ಕ್ಷಣದಲ್ಲಿ ಲಭಿಸಿದ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ.ಅನೇಕ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ಚೂರಲ್ಮಾಲಾದಿಂದ ಮುಂಡಕೈಗೆ ಹೋಗುವ ರಸ್ತೆ ಕೊಚ್ಚಿಹೋಗಿದ್ದು, ರಕ್ಷಣಾ ಪ್ರಯತ್ನಗಳಿಗೆ ತೀವ್ರ ಅಡ್ಡಿಯಾಗಿದೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago