ವರಕವಿ ಅವರ ಕಾವ್ಯವು ಕನ್ನಡ ಭಾಷೆ, ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ- ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

ವರಕವಿ ದ.ರಾ.ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಂಸ್ಕೃತಿ ಟ್ರಸ್ಟ್ ಸಹಯೋಗದಲ್ಲಿ ನಿಸರ್ಗ ಯೋಗ ಕೇಂದ್ರದಲ್ಲಿ ನಡೆದ ಮನೆಯಂಗಳದಲ್ಲಿ ಕನ್ನಡದ ಗಾನ ಪಯಣ ಕಾರ್ಯಕ್ರಮದಲ್ಲಿ ವರಕವಿ ದ.ರಾ.ಬೇಂದ್ರೆ  ಅವರ ಕಾವ್ಯ ಕುರಿತು ಮಾತನಾಡಿದರು.

ದ.ರಾ.ಬೇಂದ್ರೆಯವರು ತನ್ನ ಜೀವನದುದ್ದಕ್ಕೂ ದುಃಖ, ನೋವು, ಕಷ್ಟಗಳನ್ನೇ ನೋಡಿದ ಕವಿ. ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ; ಕಲ್ಲು ಸಕ್ಕರೆಯಂತಹ ನಿನ್ನೆದೆಯು ಕರಗಿದರೆ ಆ ಸವಿಯ ಹಣಿಸು ನನಗೆ… ಎಂದರು. ಹೀಗಾಗಿ ಬೇಂದ್ರೆಯವರ ಜೀವನವೇ ಕಾವ್ಯ, ಕಾವ್ಯವೇ ಜೀವನ ಎಂದಾಗಿದೆ ಎಂದರು.

ಬೇಂದ್ರೆಯವರು ತಮ್ಮ ಕೃತಿಗಳಲ್ಲಿ ವೈವಿಧ್ಯಮಯ ವಿಚಾರಗಳನ್ನು ನವೋದಯ ಸಾಹಿತ್ಯದ ಸಂದರ್ಭದಲ್ಲಿ ಅಭಿವ್ಯಕ್ತಿಗೊಳಿಸಿದರು. ಶಬ್ಧ ಗಾರುಡಿಗರಾಗಿದ್ದ  ಬೇಂದ್ರೆಯವರು ಜಾನಪದ ಸಾಹಿತ್ಯ ಆಡುಭಾಷೆಯ ನುಡಿಗಟ್ಟುಗಳು ತಮ್ಮ ಕವನಗಳಲ್ಲಿ ಬಳಸಿದ್ದಾರೆ. ನಾಕುತಂತಿ ಕಾವ್ಯದ ಮೂಲಕ ನಾನು, ನೀನು, ಆನು, ತಾನು ಇವು ಮಾನವನ ಗುರುತಿಸುವಿಕೆಯ ನಾಲ್ಕು ಹಂತಗಳು ಎಂದರು.

ದ.ರಾ.ಬೇಂದ್ರೆಯವರಿಗೆ ಜ್ಞಾನಪೀಠ, ಕೇಂದ್ರ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಮುಂತಾದ ಪ್ರಶಸ್ತಿ ಪುರಸ್ಕಾರಗಳು   ಅವರ ಪ್ರತಿಭೆಗೆ ಸಂದ ಗೌರವಗಳಾದವು ಎಂದರು.

ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಗಿರೀಶ್.ಎನ್.ಬರಗೂರು ಮಾತನಾಡಿ, ಬೇಂದ್ರೆಯವರ ಕವನಗಳ ವಿಚಾರಗಳೇ ವೈವಿಧ್ಯಮಯವಾಗಿದೆ.  ನರಬಲಿ ಕವನ ಬರೆದು ಸೆರೆಮನೆ ವಾಸ ಅನುಭವಿಸಿದ  ಬೇಂದ್ರೆಯವರು, ಒಂದೇ ಒಂದೇ ಕರ್ನಾಟಕ ಒಂದೇ ಎನ್ನುವ ಮೂಲಕ ಕರ್ನಾಟಕ ಏಕೀಕರಣಕ್ಕೆ ಬೆಂಬಲಿಸಿದರು.

ನಾನು ಬಡವಿ ಆತ ಬಡವ ಒಲವೇ ನಮ್ಮ ಬದುಕು,  ಉತ್ತರ ದ್ರುವದಿಂ ದಕ್ಷಿಣ ದ್ರುವಕೂ ಚುಂಬಕ ಗಾಳಿಯೂ ಬೀಸಿದೆ,  ಮೂಡಣ ಮನೆಯ ಮುತ್ತಿನ ನೀರಿನ ಎರಕವ ಹೊಯ್ದ, ಶ್ರಾವಣ ಬಂತು, ಇಳಿದು ಬಾ ತಾಯಿ ಇಳಿದು ಬಾ, ಕುರುಡು ಕಾಂಚಾಣ ಕುಣಿಯುತಲಿತ್ತು ಮುಂತಾದ ನೂರಾರು ಕವನಗಳು ಸಹೃದಯರ ಮನಸ್ಸನ್ನು ಸದಾ  ಉಲ್ಲಾಸಗೊಳಿಸುತ್ತವೆ. ಬೇಂದ್ರೆಯವರ ಕಾವ್ಯಗಳ ಭಾಷೆ ಮತ್ತು ಭಾವನೆಗಳು ಜನಸಾಮಾನ್ಯರು ಸಾಹಿತ್ಯದಲ್ಲಿ ಅಭಿರುಚಿ ಹೊಂದಲು ಸಹಕಾರಿ ಆಗಿವೆ ಎಂದರು.

ಕನ್ನಡ ಗಾನ ಪಯಣ ಕಾರ್ಯಕ್ರಮದಲ್ಲಿ ದ.ರಾ.ಬೇಂದ್ರೆ ಅವರ ಭಾವಗೀತೆಗಳನ್ನು ಕಲಾವಿದರಾದ ಕೆ.ಪಿ.ಪ್ರಕಾಶ್,  ನಾಗರತ್ಮ‌ಮಹಾಬಲೇಶ್ವರ್, ಚಂದ್ರಶೇಖರ್, ಸುರೇಖಾ ರವಿರಾಜ್, ನಾಗರತ್ನಮ್ಮ, ಎಂ.ಎಲ್.ಆಶಾ, ಜಯಲಕ್ಷ್ಮಿ ನಟರಾಜು, ಎಂ.ಪಿ.ಸಿ.ವೆಂಕಟೇಶ್, ನಾಗರಾಜು,ಜಿ.ಸುರೇಶ್, ಷಫೀರ್, ನಾಗದಳ ನಟರಾಜ್ ಮುಂತಾದವರು ಹಾಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಗ ಸಂಘದ ಅಧ್ಯಕ್ಷ ಪ್ರೊ.ಎಂ.ಜಿ.ಅಮರನಾಥ, ಪ್ರಧಾನ ಕಾರ್ಯದರ್ಶಿ ಯೋಗನಟರಾಜು, ಖಜಾಂಚಿ  ಕೆ.ಆರ್.ಶ್ಯಾಮಸುಂದರ್, ಸಂಚಾಲಕ ಎನ್.ಚಂದ್ರಶೇಖರ್, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಭಾರತ ಸೇವಾದಳ ತಾಲ್ಲೂಕು ಅಧ್ಯಕ್ಷ ನಂಜುಂಡೇಗೌಡ, ಕಾರ್ಯದರ್ಶಿ ಹಮಾಮ್ ವೆಂಕಟೇಶ್, ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಿವೃತ್ತ ಪ್ರಾಂಶುಪಾಲ ಮೇಜರ್ ಎಸ್.ಮಹಾಬಲೇಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿ ಮುನಿರಾಜು, ಸಂಸ್ಕ್ರತಿ ಟ್ರಸ್ಟ್‌ ಅಧ್ಯಕ್ಷ ಎಚ್.ಎಸ್.ನಾಗೇಶ್, ಕಾರ್ಯದರ್ಶಿ ಸಂಪತ್ತಕುಮಾರ್, ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

46 minutes ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

2 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

3 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

4 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

13 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

22 hours ago