ವರಕವಿ ಅವರ ಕಾವ್ಯವು ಕನ್ನಡ ಭಾಷೆ, ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ- ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

ವರಕವಿ ದ.ರಾ.ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಂಸ್ಕೃತಿ ಟ್ರಸ್ಟ್ ಸಹಯೋಗದಲ್ಲಿ ನಿಸರ್ಗ ಯೋಗ ಕೇಂದ್ರದಲ್ಲಿ ನಡೆದ ಮನೆಯಂಗಳದಲ್ಲಿ ಕನ್ನಡದ ಗಾನ ಪಯಣ ಕಾರ್ಯಕ್ರಮದಲ್ಲಿ ವರಕವಿ ದ.ರಾ.ಬೇಂದ್ರೆ  ಅವರ ಕಾವ್ಯ ಕುರಿತು ಮಾತನಾಡಿದರು.

ದ.ರಾ.ಬೇಂದ್ರೆಯವರು ತನ್ನ ಜೀವನದುದ್ದಕ್ಕೂ ದುಃಖ, ನೋವು, ಕಷ್ಟಗಳನ್ನೇ ನೋಡಿದ ಕವಿ. ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ; ಕಲ್ಲು ಸಕ್ಕರೆಯಂತಹ ನಿನ್ನೆದೆಯು ಕರಗಿದರೆ ಆ ಸವಿಯ ಹಣಿಸು ನನಗೆ… ಎಂದರು. ಹೀಗಾಗಿ ಬೇಂದ್ರೆಯವರ ಜೀವನವೇ ಕಾವ್ಯ, ಕಾವ್ಯವೇ ಜೀವನ ಎಂದಾಗಿದೆ ಎಂದರು.

ಬೇಂದ್ರೆಯವರು ತಮ್ಮ ಕೃತಿಗಳಲ್ಲಿ ವೈವಿಧ್ಯಮಯ ವಿಚಾರಗಳನ್ನು ನವೋದಯ ಸಾಹಿತ್ಯದ ಸಂದರ್ಭದಲ್ಲಿ ಅಭಿವ್ಯಕ್ತಿಗೊಳಿಸಿದರು. ಶಬ್ಧ ಗಾರುಡಿಗರಾಗಿದ್ದ  ಬೇಂದ್ರೆಯವರು ಜಾನಪದ ಸಾಹಿತ್ಯ ಆಡುಭಾಷೆಯ ನುಡಿಗಟ್ಟುಗಳು ತಮ್ಮ ಕವನಗಳಲ್ಲಿ ಬಳಸಿದ್ದಾರೆ. ನಾಕುತಂತಿ ಕಾವ್ಯದ ಮೂಲಕ ನಾನು, ನೀನು, ಆನು, ತಾನು ಇವು ಮಾನವನ ಗುರುತಿಸುವಿಕೆಯ ನಾಲ್ಕು ಹಂತಗಳು ಎಂದರು.

ದ.ರಾ.ಬೇಂದ್ರೆಯವರಿಗೆ ಜ್ಞಾನಪೀಠ, ಕೇಂದ್ರ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಮುಂತಾದ ಪ್ರಶಸ್ತಿ ಪುರಸ್ಕಾರಗಳು   ಅವರ ಪ್ರತಿಭೆಗೆ ಸಂದ ಗೌರವಗಳಾದವು ಎಂದರು.

ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಗಿರೀಶ್.ಎನ್.ಬರಗೂರು ಮಾತನಾಡಿ, ಬೇಂದ್ರೆಯವರ ಕವನಗಳ ವಿಚಾರಗಳೇ ವೈವಿಧ್ಯಮಯವಾಗಿದೆ.  ನರಬಲಿ ಕವನ ಬರೆದು ಸೆರೆಮನೆ ವಾಸ ಅನುಭವಿಸಿದ  ಬೇಂದ್ರೆಯವರು, ಒಂದೇ ಒಂದೇ ಕರ್ನಾಟಕ ಒಂದೇ ಎನ್ನುವ ಮೂಲಕ ಕರ್ನಾಟಕ ಏಕೀಕರಣಕ್ಕೆ ಬೆಂಬಲಿಸಿದರು.

ನಾನು ಬಡವಿ ಆತ ಬಡವ ಒಲವೇ ನಮ್ಮ ಬದುಕು,  ಉತ್ತರ ದ್ರುವದಿಂ ದಕ್ಷಿಣ ದ್ರುವಕೂ ಚುಂಬಕ ಗಾಳಿಯೂ ಬೀಸಿದೆ,  ಮೂಡಣ ಮನೆಯ ಮುತ್ತಿನ ನೀರಿನ ಎರಕವ ಹೊಯ್ದ, ಶ್ರಾವಣ ಬಂತು, ಇಳಿದು ಬಾ ತಾಯಿ ಇಳಿದು ಬಾ, ಕುರುಡು ಕಾಂಚಾಣ ಕುಣಿಯುತಲಿತ್ತು ಮುಂತಾದ ನೂರಾರು ಕವನಗಳು ಸಹೃದಯರ ಮನಸ್ಸನ್ನು ಸದಾ  ಉಲ್ಲಾಸಗೊಳಿಸುತ್ತವೆ. ಬೇಂದ್ರೆಯವರ ಕಾವ್ಯಗಳ ಭಾಷೆ ಮತ್ತು ಭಾವನೆಗಳು ಜನಸಾಮಾನ್ಯರು ಸಾಹಿತ್ಯದಲ್ಲಿ ಅಭಿರುಚಿ ಹೊಂದಲು ಸಹಕಾರಿ ಆಗಿವೆ ಎಂದರು.

ಕನ್ನಡ ಗಾನ ಪಯಣ ಕಾರ್ಯಕ್ರಮದಲ್ಲಿ ದ.ರಾ.ಬೇಂದ್ರೆ ಅವರ ಭಾವಗೀತೆಗಳನ್ನು ಕಲಾವಿದರಾದ ಕೆ.ಪಿ.ಪ್ರಕಾಶ್,  ನಾಗರತ್ಮ‌ಮಹಾಬಲೇಶ್ವರ್, ಚಂದ್ರಶೇಖರ್, ಸುರೇಖಾ ರವಿರಾಜ್, ನಾಗರತ್ನಮ್ಮ, ಎಂ.ಎಲ್.ಆಶಾ, ಜಯಲಕ್ಷ್ಮಿ ನಟರಾಜು, ಎಂ.ಪಿ.ಸಿ.ವೆಂಕಟೇಶ್, ನಾಗರಾಜು,ಜಿ.ಸುರೇಶ್, ಷಫೀರ್, ನಾಗದಳ ನಟರಾಜ್ ಮುಂತಾದವರು ಹಾಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಗ ಸಂಘದ ಅಧ್ಯಕ್ಷ ಪ್ರೊ.ಎಂ.ಜಿ.ಅಮರನಾಥ, ಪ್ರಧಾನ ಕಾರ್ಯದರ್ಶಿ ಯೋಗನಟರಾಜು, ಖಜಾಂಚಿ  ಕೆ.ಆರ್.ಶ್ಯಾಮಸುಂದರ್, ಸಂಚಾಲಕ ಎನ್.ಚಂದ್ರಶೇಖರ್, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಭಾರತ ಸೇವಾದಳ ತಾಲ್ಲೂಕು ಅಧ್ಯಕ್ಷ ನಂಜುಂಡೇಗೌಡ, ಕಾರ್ಯದರ್ಶಿ ಹಮಾಮ್ ವೆಂಕಟೇಶ್, ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಿವೃತ್ತ ಪ್ರಾಂಶುಪಾಲ ಮೇಜರ್ ಎಸ್.ಮಹಾಬಲೇಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿ ಮುನಿರಾಜು, ಸಂಸ್ಕ್ರತಿ ಟ್ರಸ್ಟ್‌ ಅಧ್ಯಕ್ಷ ಎಚ್.ಎಸ್.ನಾಗೇಶ್, ಕಾರ್ಯದರ್ಶಿ ಸಂಪತ್ತಕುಮಾರ್, ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

5 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

6 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago