ವರಕವಿ ದ.ರಾ.ಬೇಂದ್ರೆ ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

ವರಕವಿ ದ.ರಾ.ಬೇಂದ್ರೆ ಅವರು ಜನಸಾಮಾನ್ಯರ ನೋವು-ನಲಿವುಗಳನ್ನು, ಚೆಲುವು-ಒಲವುಗಳನ್ನು ತಮ್ಮ  ಕವನಗಳಲ್ಲಿ ಮೂಡಿಸಿದರು. ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು ಎಂದು ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ಕಾರ್ಯಾಲಯದಲ್ಲಿ ನಡೆದ ವರಕವಿ ದ.ರಾ.ಬೇಂದ್ರೆಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಭಾಷೆಯ ಪದ ಸಂಪತ್ತು ಮತ್ತು ನಾದ ಸಂಪತ್ತು ಎರಡನ್ನೂ ಬಳಸುವ ಮೂಲಕ  ಬೇಂದ್ರೆಯವರ ತಮ್ಮ ಕಾವ್ಯಗುಣದ ಸತ್ವವನ್ನು  ಉನ್ನತಮಟ್ಟಕ್ಕೆ ಏರಿಸಿದವರು. ಇಂದರಿಂದಾಗಿ    ಬೇಂದ್ರೆಯವರ ಕವಿತೆಗಳು ಸಹೃದಯರ ಮನಸ್ಸನ್ನು ಆರ್ಕಷಣೆಗೊಳಿಸಿವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ದ.ರಾ.ಬೇಂದ್ರೆ ಅವರು ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ತನಕ ಎಲ್ಲಾ ವಿಚಾರಗಳನ್ನು ಕವಿತೆಗಳಲ್ಲಿ  ತಂದಿದ್ದಾರೆ. ಶಬ್ದಗಾರುಡಿಗಾರ ಬೇಂದ್ರೆ ತಮ್ಮ ಕವಿತೆಗಳ ಮೂಲಕ ಹೊಸಗನ್ನಡ ಕಾವ್ಯಕ್ಕೆ ಹೊಸತನ ನೀಡಿದರು ಎಂದರು.

ನಾಗದಳ ಸಂಘಟನೆಯ ನಟರಾಜು ಮಾತನಾಡಿ, ಬೇಂದ್ರೆ ಅವರ ಕಾವ್ಯದಲ್ಲಿ ದೇಸಿ ಸೊಗಡು, ಪ್ರಕೃತಿ, ಆಧ್ಯಾತ್ಮಿಕತೆಯ ಜೊತೆಗೆ ಸಾಮಾನ್ಯ ಮನುಷ್ಯ ಜೀವನದ ಸಾಮಾಜಿಕ ವ್ಯವಸ್ಥೆಯ ವಿವಿಧ ಆಯಾಮಗಳನ್ನು ತಮ್ಮ ಕಾವ್ಯದ ಮೂಲಕ ಬಿಂಬಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು,    ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಪೀರ್, ಕೋದಂಡರಾಮ್,  ಎ.ಅಣ್ಣಯ್ಯ, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಪತ್ರಕರ್ತ ಮಂಜುನಾಥ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

2 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

13 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

18 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago