Categories: ಕೋಲಾರ

ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ಆತ್ಮಹತ್ಯೆ: ಪತಿ ಮನೆ ಪಕ್ಕದಲ್ಲೇ ಅಂತ್ಯಸಂಸ್ಕಾರ

ಕೋಲಾರ: ನಗರ ಹೊರವಲಯದ ಸಹಕಾರ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಮಾನಸಾ (24) ಅವರ ಪೋಷಕರು, ಭಾನುವಾರ ಅಳಿಯನ ಮನೆ ಮುಂದೆ ಪುತ್ರಿಯ ಶವವಿಟ್ಟು ಪ್ರತಿಭಟನೆ ನಡೆಸಿದರು.

ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದಿಂದಲೇ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿದರು. ಮಾನಸಾ ಪತಿ ಉಲ್ಲಾಸ್‍ಗೌಡ ಅವರ ತುರಾಂಡಹಳ್ಳಿ ಗ್ರಾಮದ ನಿವಾಸದ ಮುಂದಿನ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಲು ಮುಂದಾದರು. ಆಗ ಅವರನ್ನು ತಡೆದ ಪೊಲೀಸರು, ನ್ಯಾಯ ಕೊಡಿಸುವ ಭರವಸೆ ನೀಡಿದರು.

ಬಳಿಕ ಪತಿ ಮನೆಯ ಪಕ್ಕದಲ್ಲಿನ ಕೈತೋಟದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪತಿ ಹಾಗೂ ಅವರು ಕುಟುಂಬದವರು ಇರಲಿಲ್ಲ. ಒಂದು ವರ್ಷದ ಹಿಂದೆ ಮಾನಸಾ ಹಾಗೂ ಉಲ್ಲಾಸ್‍ಗೌಡ ವಿವಾಹವಾಗಿದ್ದರು. ಅವರು ಬೆಂಗಳೂರಿನ ಗಿರಿನಗರದಲ್ಲಿ ವಾಸವಿದ್ದರು.

ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದ ದೂರು ಬಂದಾಗ ಹಿರಿಯರು ಹಲವರು ಬಾರಿ ರಾಜಿ ಸಂಧಾನ ನಡೆಸಿದ್ದರು. ಆನಂತರ ಪತಿ ಕುಟುಂಬದವರು ಮಾನಸಾ ಅವರನ್ನು ತವರು ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ. ವಿಚ್ಚೇದನ ಪಡೆದುಕೊಳ್ಳುವ ಉದ್ದೇಶದಿಂದ ವಕೀಲರ ಕಡೆಯಿಂದ ನೋಟಿಸ್ ಕೂಡ ಬಂದಿತ್ತು ಎಂಬುದು ಗೊತ್ತಾಗಿದೆ.

ಕೌಟುಂಬಿಕ ಕಲಹದಿಂದ ಬೇಸತ್ತು ಮಾನಸಾ, ಶನಿವಾರ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ನನ್ನ ಸಾವಿಗೆ ಯಾರೂ ಕಾರಣರಲ್ಲ, ನನ್ನ ಜೀವನ ಉಲ್ಲಾಸ್ ಕುಟುಂಬದಿಂದ ಮುಗಿದಿದೆ. ದಯವಿಟ್ಟು ನನ್ನ ಒಡವೆಯನ್ನು ನನ್ನ ಮನೆಗೆ ವಾಪಸ್ ಮಾಡಿ, ಧನ್ಯವಾದಗಳು’ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ, ಕೋಲಾರ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಕಾಂತರಾಜ್‌ ಹಾಗೂ ಪಿಎಸ್‌ಐ ವಿ.ಭಾರತಿ ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲಿಸಿದ್ದಾರೆ.

‘ಮಾನಸಾ ಎಂಬ ವಿವಾಹಿತೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣಿ ಕಿರುಕುಳದಿಂದ ಸಾವು ಸಂಭವಿಸಿರುವ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪತಿ ಉಲ್ಲಾಸ್‌, ಅವರ ಅಪ್ಪ, ಅಮ್ಮ ಹಾಗೂ ಅವರ ಮಾವಂದಿರು ಸೇರಿದಂತೆ ಐವರ ಮೇಲೆ ದೂರು ನೀಡಿದ್ದಾರೆ. ಈ ವಿಚಾರವಾಗಿ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದೇವೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ನಡೆಸಿ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ತಿಳಿಸಿದರು.

ಪತಿ ಮನೆ ಮುಂದೆ ಯುವತಿಯ ಪೋಷಕರು ಪ್ರತಿಭಟನೆ ನಡೆಸಿರುವ ಸಂಬಂಧ ಪ್ರತಿಕ್ರಿಯಿಸಿ, ‘ಇದು ಕುಟುಂಬದ  ವೈಯಕ್ತಿಕ ವಿಚಾರ. ಮನವೊಲಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಅವರಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದೇವೆ’ ಎಂದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

37 minutes ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

4 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

4 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

7 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

9 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

21 hours ago