ಕೋಲಾರ: ನಗರ ಹೊರವಲಯದ ಸಹಕಾರ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಮಾನಸಾ (24) ಅವರ ಪೋಷಕರು, ಭಾನುವಾರ ಅಳಿಯನ ಮನೆ ಮುಂದೆ ಪುತ್ರಿಯ ಶವವಿಟ್ಟು ಪ್ರತಿಭಟನೆ ನಡೆಸಿದರು.
ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದಿಂದಲೇ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿದರು. ಮಾನಸಾ ಪತಿ ಉಲ್ಲಾಸ್ಗೌಡ ಅವರ ತುರಾಂಡಹಳ್ಳಿ ಗ್ರಾಮದ ನಿವಾಸದ ಮುಂದಿನ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಲು ಮುಂದಾದರು. ಆಗ ಅವರನ್ನು ತಡೆದ ಪೊಲೀಸರು, ನ್ಯಾಯ ಕೊಡಿಸುವ ಭರವಸೆ ನೀಡಿದರು.
ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದ ದೂರು ಬಂದಾಗ ಹಿರಿಯರು ಹಲವರು ಬಾರಿ ರಾಜಿ ಸಂಧಾನ ನಡೆಸಿದ್ದರು. ಆನಂತರ ಪತಿ ಕುಟುಂಬದವರು ಮಾನಸಾ ಅವರನ್ನು ತವರು ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ. ವಿಚ್ಚೇದನ ಪಡೆದುಕೊಳ್ಳುವ ಉದ್ದೇಶದಿಂದ ವಕೀಲರ ಕಡೆಯಿಂದ ನೋಟಿಸ್ ಕೂಡ ಬಂದಿತ್ತು ಎಂಬುದು ಗೊತ್ತಾಗಿದೆ.
‘ನನ್ನ ಸಾವಿಗೆ ಯಾರೂ ಕಾರಣರಲ್ಲ, ನನ್ನ ಜೀವನ ಉಲ್ಲಾಸ್ ಕುಟುಂಬದಿಂದ ಮುಗಿದಿದೆ. ದಯವಿಟ್ಟು ನನ್ನ ಒಡವೆಯನ್ನು ನನ್ನ ಮನೆಗೆ ವಾಪಸ್ ಮಾಡಿ, ಧನ್ಯವಾದಗಳು’ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಕೋಲಾರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಕಾಂತರಾಜ್ ಹಾಗೂ ಪಿಎಸ್ಐ ವಿ.ಭಾರತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
‘ಮಾನಸಾ ಎಂಬ ವಿವಾಹಿತೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣಿ ಕಿರುಕುಳದಿಂದ ಸಾವು ಸಂಭವಿಸಿರುವ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪತಿ ಉಲ್ಲಾಸ್, ಅವರ ಅಪ್ಪ, ಅಮ್ಮ ಹಾಗೂ ಅವರ ಮಾವಂದಿರು ಸೇರಿದಂತೆ ಐವರ ಮೇಲೆ ದೂರು ನೀಡಿದ್ದಾರೆ. ಈ ವಿಚಾರವಾಗಿ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದೇವೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ನಡೆಸಿ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದರು.
ಪತಿ ಮನೆ ಮುಂದೆ ಯುವತಿಯ ಪೋಷಕರು ಪ್ರತಿಭಟನೆ ನಡೆಸಿರುವ ಸಂಬಂಧ ಪ್ರತಿಕ್ರಿಯಿಸಿ, ‘ಇದು ಕುಟುಂಬದ ವೈಯಕ್ತಿಕ ವಿಚಾರ. ಮನವೊಲಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಅವರಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದೇವೆ’ ಎಂದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…