ಕೋಲಾರ: ನಗರ ಹೊರವಲಯದ ಸಹಕಾರ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಮಾನಸಾ (24) ಅವರ ಪೋಷಕರು, ಭಾನುವಾರ ಅಳಿಯನ ಮನೆ ಮುಂದೆ ಪುತ್ರಿಯ ಶವವಿಟ್ಟು ಪ್ರತಿಭಟನೆ ನಡೆಸಿದರು.
ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದಿಂದಲೇ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿದರು. ಮಾನಸಾ ಪತಿ ಉಲ್ಲಾಸ್ಗೌಡ ಅವರ ತುರಾಂಡಹಳ್ಳಿ ಗ್ರಾಮದ ನಿವಾಸದ ಮುಂದಿನ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಲು ಮುಂದಾದರು. ಆಗ ಅವರನ್ನು ತಡೆದ ಪೊಲೀಸರು, ನ್ಯಾಯ ಕೊಡಿಸುವ ಭರವಸೆ ನೀಡಿದರು.
ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದ ದೂರು ಬಂದಾಗ ಹಿರಿಯರು ಹಲವರು ಬಾರಿ ರಾಜಿ ಸಂಧಾನ ನಡೆಸಿದ್ದರು. ಆನಂತರ ಪತಿ ಕುಟುಂಬದವರು ಮಾನಸಾ ಅವರನ್ನು ತವರು ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ. ವಿಚ್ಚೇದನ ಪಡೆದುಕೊಳ್ಳುವ ಉದ್ದೇಶದಿಂದ ವಕೀಲರ ಕಡೆಯಿಂದ ನೋಟಿಸ್ ಕೂಡ ಬಂದಿತ್ತು ಎಂಬುದು ಗೊತ್ತಾಗಿದೆ.
‘ನನ್ನ ಸಾವಿಗೆ ಯಾರೂ ಕಾರಣರಲ್ಲ, ನನ್ನ ಜೀವನ ಉಲ್ಲಾಸ್ ಕುಟುಂಬದಿಂದ ಮುಗಿದಿದೆ. ದಯವಿಟ್ಟು ನನ್ನ ಒಡವೆಯನ್ನು ನನ್ನ ಮನೆಗೆ ವಾಪಸ್ ಮಾಡಿ, ಧನ್ಯವಾದಗಳು’ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಕೋಲಾರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಕಾಂತರಾಜ್ ಹಾಗೂ ಪಿಎಸ್ಐ ವಿ.ಭಾರತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
‘ಮಾನಸಾ ಎಂಬ ವಿವಾಹಿತೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣಿ ಕಿರುಕುಳದಿಂದ ಸಾವು ಸಂಭವಿಸಿರುವ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪತಿ ಉಲ್ಲಾಸ್, ಅವರ ಅಪ್ಪ, ಅಮ್ಮ ಹಾಗೂ ಅವರ ಮಾವಂದಿರು ಸೇರಿದಂತೆ ಐವರ ಮೇಲೆ ದೂರು ನೀಡಿದ್ದಾರೆ. ಈ ವಿಚಾರವಾಗಿ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದೇವೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ನಡೆಸಿ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದರು.
ಪತಿ ಮನೆ ಮುಂದೆ ಯುವತಿಯ ಪೋಷಕರು ಪ್ರತಿಭಟನೆ ನಡೆಸಿರುವ ಸಂಬಂಧ ಪ್ರತಿಕ್ರಿಯಿಸಿ, ‘ಇದು ಕುಟುಂಬದ ವೈಯಕ್ತಿಕ ವಿಚಾರ. ಮನವೊಲಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಅವರಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದೇವೆ’ ಎಂದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…