ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ.
26 ವರ್ಷದ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದ ಗೃಹಿಣಿ, ಅಕ್ಟೋಬರ್ 26 ರಂದು ಗೋವಿಂದರಾಜ ನಗರ ತವರುಮನೆಯಲ್ಲಿ ಫ್ಯಾನಿಗೆ ಕೊರಳೊಡ್ಡಿದ್ದ ಗೃಹಿಣಿ ಐಶ್ವರ್ಯ. ಘಟನೆ ಸಂಬಂಧ ಐಶ್ವರ್ಯ ತಾಯಿಯಿಂದ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲು.
ಐಶ್ವರ್ಯ ಸುಸೈಡ್ ಬಳಿಕ ಗೋವಾ, ಮುಂಬೈನಲ್ಲಿ ಪಾರ್ಟಿಮಾಡುತ್ತಿದ್ದ ಪತಿ ಮನೆಯ ಸದಸ್ಯರು. ಪ್ರಸಿದ್ದ ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಜತೆ ಟೈಯಾಪ್ ಆಗಿರುವ ಸಿತಾ ಐಸ್ ಕ್ರೀಮ್ ಪ್ರೈ,ಲಿ. ಮಾಲೀಕರಾಗಿದ್ದ ರಾಜೇಶ್ ಕುಟುಂಬ.
ಮದುವೆ ಮಾಡಿಸಿದ್ದು ಸಂಬಂಧಿಕರೇ ಕೊನೆಗೂ ಮದುವೆ ಮುರಿದಿದ್ದು ಸಂಬಂಧಿಕರೇ ಎಂಬ ಕೂಗು ಕೇಳಿಬಂದಿದೆ. ಐಶ್ವರ್ಯ ಯುಎಸ್ ಎ ನಲ್ಲಿ ಎಂಬಿಎ ಮಾಡಿಕೊಂಡಿದ್ದರು. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದರು.
ಸಿತಾ ಐಸ್ ಕ್ರೀಮ್ ಪ್ರೈ,ಲಿ ಕಂಪನಿಯಲ್ಲಿ ಆಡಿಟರ್ ಆಗಿದ್ದ ಐಶ್ವರ್ಯ ಸಂಬಂಧಿ ರವೀಂದ್ರ ಎಂಬುವವರು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದರು. ರವೀಂದ್ರ ಎಂಬುವವರು ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ಆಗಿದ್ದಾರೆ. ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಉಂಟಾಗಿತ್ತು. ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ಹುಳಿ ಹಿಂಡಿರುವ ದಾಯಾದಿಗಳು ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಮನನೊಂದ ಐಶ್ವರ್ಯ ಕಳೆದ ಅ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಾರೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…