ವರದಕ್ಷಿಣೆ ಕಿರುಕುಳ ಗೃಹಿಣಿ ಆತ್ಮಹತ್ಯೆ ಆರೋಪ ಪ್ರಕರಣ: ಪತಿ ರಾಜೇಶ್ ಸೇರಿ ಐವರು ಆರೋಪಿಗಳ ಬಂಧನ: ಮುಂದುವರಿದ ವಿಚಾರಣೆ

ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ.

26 ವರ್ಷದ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದ ಗೃಹಿಣಿ, ಅಕ್ಟೋಬರ್ 26 ರಂದು ಗೋವಿಂದರಾಜ ನಗರ ತವರುಮನೆಯಲ್ಲಿ ಫ್ಯಾನಿಗೆ ಕೊರಳೊಡ್ಡಿದ್ದ ಗೃಹಿಣಿ ಐಶ್ವರ್ಯ. ಘಟ‌ನೆ ಸಂಬಂಧ ಐಶ್ವರ್ಯ ತಾಯಿಯಿಂದ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲು.

ಪ್ರಕರಣ ಸಂಬಂಧ ಮೃತ ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ರನ್ನ ಬಂಧಿಸಿ ವಿಚಾರಣೆ ಮುಂದುವರಿಸಿರುವ ಪೊಲೀಸರು.

ಐಶ್ವರ್ಯ ಸುಸೈಡ್ ಬಳಿಕ ಗೋವಾ, ಮುಂಬೈ‌ನಲ್ಲಿ‌ ಪಾರ್ಟಿಮಾಡುತ್ತಿದ್ದ ಪತಿ ಮನೆಯ ಸದಸ್ಯರು. ಪ್ರಸಿದ್ದ ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಜತೆ ಟೈಯಾಪ್ ಆಗಿರುವ ಸಿತಾ ಐಸ್ ಕ್ರೀಮ್ ಪ್ರೈ,ಲಿ. ಮಾಲೀಕರಾಗಿದ್ದ ರಾಜೇಶ್ ಕುಟುಂಬ.

ಮದುವೆ ಮಾಡಿಸಿದ್ದು ಸಂಬಂಧಿಕರೇ ಕೊನೆಗೂ ಮದುವೆ ಮುರಿದಿದ್ದು ಸಂಬಂಧಿಕರೇ ಎಂಬ ಕೂಗು ಕೇಳಿಬಂದಿದೆ. ಐಶ್ವರ್ಯ ಯುಎಸ್ ಎ ನಲ್ಲಿ ಎಂಬಿಎ ಮಾಡಿಕೊಂಡಿದ್ದರು. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದರು.

ಸಿತಾ ಐಸ್ ಕ್ರೀಮ್ ಪ್ರೈ,ಲಿ ಕಂಪನಿಯಲ್ಲಿ ಆಡಿಟರ್ ಆಗಿದ್ದ ಐಶ್ವರ್ಯ ಸಂಬಂಧಿ ರವೀಂದ್ರ ಎಂಬುವವರು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದರು. ರವೀಂದ್ರ ಎಂಬುವವರು ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ಆಗಿದ್ದಾರೆ. ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಉಂಟಾಗಿತ್ತು. ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ಹುಳಿ ಹಿಂಡಿರುವ ದಾಯಾದಿಗಳು ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಮನನೊಂದ ಐಶ್ವರ್ಯ ಕಳೆದ ಅ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago