ವರದಕ್ಷಿಣೆ ಕಿರುಕುಳ ಗೃಹಿಣಿ ಆತ್ಮಹತ್ಯೆ ಆರೋಪ ಪ್ರಕರಣ: ಪತಿ ರಾಜೇಶ್ ಸೇರಿ ಐವರು ಆರೋಪಿಗಳ ಬಂಧನ: ಮುಂದುವರಿದ ವಿಚಾರಣೆ

ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ.

26 ವರ್ಷದ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದ ಗೃಹಿಣಿ, ಅಕ್ಟೋಬರ್ 26 ರಂದು ಗೋವಿಂದರಾಜ ನಗರ ತವರುಮನೆಯಲ್ಲಿ ಫ್ಯಾನಿಗೆ ಕೊರಳೊಡ್ಡಿದ್ದ ಗೃಹಿಣಿ ಐಶ್ವರ್ಯ. ಘಟ‌ನೆ ಸಂಬಂಧ ಐಶ್ವರ್ಯ ತಾಯಿಯಿಂದ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲು.

ಪ್ರಕರಣ ಸಂಬಂಧ ಮೃತ ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ರನ್ನ ಬಂಧಿಸಿ ವಿಚಾರಣೆ ಮುಂದುವರಿಸಿರುವ ಪೊಲೀಸರು.

ಐಶ್ವರ್ಯ ಸುಸೈಡ್ ಬಳಿಕ ಗೋವಾ, ಮುಂಬೈ‌ನಲ್ಲಿ‌ ಪಾರ್ಟಿಮಾಡುತ್ತಿದ್ದ ಪತಿ ಮನೆಯ ಸದಸ್ಯರು. ಪ್ರಸಿದ್ದ ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಜತೆ ಟೈಯಾಪ್ ಆಗಿರುವ ಸಿತಾ ಐಸ್ ಕ್ರೀಮ್ ಪ್ರೈ,ಲಿ. ಮಾಲೀಕರಾಗಿದ್ದ ರಾಜೇಶ್ ಕುಟುಂಬ.

ಮದುವೆ ಮಾಡಿಸಿದ್ದು ಸಂಬಂಧಿಕರೇ ಕೊನೆಗೂ ಮದುವೆ ಮುರಿದಿದ್ದು ಸಂಬಂಧಿಕರೇ ಎಂಬ ಕೂಗು ಕೇಳಿಬಂದಿದೆ. ಐಶ್ವರ್ಯ ಯುಎಸ್ ಎ ನಲ್ಲಿ ಎಂಬಿಎ ಮಾಡಿಕೊಂಡಿದ್ದರು. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದರು.

ಸಿತಾ ಐಸ್ ಕ್ರೀಮ್ ಪ್ರೈ,ಲಿ ಕಂಪನಿಯಲ್ಲಿ ಆಡಿಟರ್ ಆಗಿದ್ದ ಐಶ್ವರ್ಯ ಸಂಬಂಧಿ ರವೀಂದ್ರ ಎಂಬುವವರು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದರು. ರವೀಂದ್ರ ಎಂಬುವವರು ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ಆಗಿದ್ದಾರೆ. ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಉಂಟಾಗಿತ್ತು. ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ಹುಳಿ ಹಿಂಡಿರುವ ದಾಯಾದಿಗಳು ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಮನನೊಂದ ಐಶ್ವರ್ಯ ಕಳೆದ ಅ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

30 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago