ವರದಕ್ಷಿಣೆ ಕಿರುಕುಳ ಗೃಹಿಣಿ ಆತ್ಮಹತ್ಯೆ ಆರೋಪ ಪ್ರಕರಣ: ಪತಿ ರಾಜೇಶ್ ಸೇರಿ ಐವರು ಆರೋಪಿಗಳ ಬಂಧನ: ಮುಂದುವರಿದ ವಿಚಾರಣೆ

ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ.

26 ವರ್ಷದ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದ ಗೃಹಿಣಿ, ಅಕ್ಟೋಬರ್ 26 ರಂದು ಗೋವಿಂದರಾಜ ನಗರ ತವರುಮನೆಯಲ್ಲಿ ಫ್ಯಾನಿಗೆ ಕೊರಳೊಡ್ಡಿದ್ದ ಗೃಹಿಣಿ ಐಶ್ವರ್ಯ. ಘಟ‌ನೆ ಸಂಬಂಧ ಐಶ್ವರ್ಯ ತಾಯಿಯಿಂದ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲು.

ಪ್ರಕರಣ ಸಂಬಂಧ ಮೃತ ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ರನ್ನ ಬಂಧಿಸಿ ವಿಚಾರಣೆ ಮುಂದುವರಿಸಿರುವ ಪೊಲೀಸರು.

ಐಶ್ವರ್ಯ ಸುಸೈಡ್ ಬಳಿಕ ಗೋವಾ, ಮುಂಬೈ‌ನಲ್ಲಿ‌ ಪಾರ್ಟಿಮಾಡುತ್ತಿದ್ದ ಪತಿ ಮನೆಯ ಸದಸ್ಯರು. ಪ್ರಸಿದ್ದ ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಜತೆ ಟೈಯಾಪ್ ಆಗಿರುವ ಸಿತಾ ಐಸ್ ಕ್ರೀಮ್ ಪ್ರೈ,ಲಿ. ಮಾಲೀಕರಾಗಿದ್ದ ರಾಜೇಶ್ ಕುಟುಂಬ.

ಮದುವೆ ಮಾಡಿಸಿದ್ದು ಸಂಬಂಧಿಕರೇ ಕೊನೆಗೂ ಮದುವೆ ಮುರಿದಿದ್ದು ಸಂಬಂಧಿಕರೇ ಎಂಬ ಕೂಗು ಕೇಳಿಬಂದಿದೆ. ಐಶ್ವರ್ಯ ಯುಎಸ್ ಎ ನಲ್ಲಿ ಎಂಬಿಎ ಮಾಡಿಕೊಂಡಿದ್ದರು. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದರು.

ಸಿತಾ ಐಸ್ ಕ್ರೀಮ್ ಪ್ರೈ,ಲಿ ಕಂಪನಿಯಲ್ಲಿ ಆಡಿಟರ್ ಆಗಿದ್ದ ಐಶ್ವರ್ಯ ಸಂಬಂಧಿ ರವೀಂದ್ರ ಎಂಬುವವರು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದರು. ರವೀಂದ್ರ ಎಂಬುವವರು ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ಆಗಿದ್ದಾರೆ. ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಉಂಟಾಗಿತ್ತು. ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ಹುಳಿ ಹಿಂಡಿರುವ ದಾಯಾದಿಗಳು ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಮನನೊಂದ ಐಶ್ವರ್ಯ ಕಳೆದ ಅ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago