ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮದುವೆಯಾದ ಕೇವಲ ಎರಡೇ ವರ್ಷಕ್ಕೆ ಕೀರ್ತಿ (24) ಎಂಬ ವಿವಾಹಿತೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾವನ್ನಪ್ಪಿದ್ದಾರೆ.
ಈ ಸಾವು ಕೇವಲ ಆತ್ಮಹ*ತ್ಯೆಯಲ್ಲ, ಇದು ವರದಕ್ಷಿಣೆ ದಾಹಕ್ಕೆ ನಡೆದ ಬಲಿ ಎಂದು ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾದ ಕೀರ್ತಿ ಅವರಿಗೆ 2023ರ ನವೆಂಬರ್ನಲ್ಲಿ ಗುರುಪ್ರಸಾದ್ ಎಂಬುವವರೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಪೋಷಕರು ಮಗಳ ಸುಖಜೀವನಕ್ಕಾಗಿ ಸುಮಾರು 35 ಲಕ್ಷ ರೂಪಾಯಿ ಖರ್ಚು ಮಾಡಿ ವಿವಾಹ ನೆರವೇರಿಸಿದ್ದರು.
ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಪತಿ ಗುರುಪ್ರಸಾದ್ ಮತ್ತು ಕುಟುಂಬಸ್ಥರು ಹೆಚ್ಚುವರಿ ಹಣಕ್ಕಾಗಿ ಕೀರ್ತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ.
ಕಳೆದ ಡಿಸೆಂಬರ್ನಲ್ಲಿ ಮನೆ ಕಟ್ಟಿಸುವ ನೆಪದಲ್ಲಿ ಪತಿ ಗುರುಪ್ರಸಾದ್ 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಮಗಳ ಬಾಳು ಹಸನಾಗಲಿ ಎಂಬ ಆಶಯದಿಂದ ಪೋಷಕರು ಈಗಾಗಲೇ 8 ಲಕ್ಷ ರೂಪಾಯಿಯನ್ನು ನೀಡಿದ್ದರು.
ಆದರೂ ಕಿರುಕುಳ ನಿಂತಿರಲಿಲ್ಲ. ಈ ನೋವಿನ ಬಗ್ಗೆ ಕೀರ್ತಿ ಪದೇ ಪದೇ ತನ್ನ ತಾಯಿಯ ಬಳಿ ಅಳಲು ತೋಡಿಕೊಂಡಿದ್ದರು. ವರದಕ್ಷಿಣೆ ಪಿಶಾಚಿಯ ಕಿರುಕುಳ ಮಿತಿಮೀರಿದಾಗ, ಜೀವನದಲ್ಲಿ ಜಿಗುಪ್ಸೆಗೊಂಡ ಕೀರ್ತಿ ನಿನ್ನೆ ಬೆಳಿಗ್ಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.
ಕೀರ್ತಿ ಆತ್ಮಹ*ತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ ಗುರುಪ್ರಸಾದ್, ಪೋಷಕರಿಗೆ ಸತ್ಯ ಮರೆಮಾಚಿ ‘ಕೀರ್ತಿ ತಲೆ ಸುತ್ತಿ ಬಿದ್ದಿದ್ದಾಳೆ, ಆಸ್ಪತ್ರೆಗೆ ಸೇರಿಸಿದ್ದೇವೆ’ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ. ಪೋಷಕರು ಆಸ್ಪತ್ರೆಗೆ ಬಂದು ನೋಡಿದಾಗ ಕೀರ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಆಘಾತಕ್ಕೊಳಗಾದ ಪೋಷಕರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಕೀರ್ತಿಯ ಅಂತ್ಯಕ್ರಿಯೆಯನ್ನು ಮಧುಗಿರಿಯ ಸ್ವಗ್ರಾಮದಲ್ಲಿ ನೆರವೇರಿಸಲು ಪೋಷಕರು ಮೃತದೇಹವನ್ನು ಕೊಂಡೊಯ್ದಿದ್ದಾರೆ.
ಪೊಲೀಸರು ಪತಿ ಗುರುಪ್ರಸಾದ್ ಮತ್ತು ಆತನ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…