ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮದುವೆಯಾದ ಕೇವಲ ಎರಡೇ ವರ್ಷಕ್ಕೆ ಕೀರ್ತಿ (24) ಎಂಬ ವಿವಾಹಿತೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾವನ್ನಪ್ಪಿದ್ದಾರೆ.
ಈ ಸಾವು ಕೇವಲ ಆತ್ಮಹ*ತ್ಯೆಯಲ್ಲ, ಇದು ವರದಕ್ಷಿಣೆ ದಾಹಕ್ಕೆ ನಡೆದ ಬಲಿ ಎಂದು ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾದ ಕೀರ್ತಿ ಅವರಿಗೆ 2023ರ ನವೆಂಬರ್ನಲ್ಲಿ ಗುರುಪ್ರಸಾದ್ ಎಂಬುವವರೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಪೋಷಕರು ಮಗಳ ಸುಖಜೀವನಕ್ಕಾಗಿ ಸುಮಾರು 35 ಲಕ್ಷ ರೂಪಾಯಿ ಖರ್ಚು ಮಾಡಿ ವಿವಾಹ ನೆರವೇರಿಸಿದ್ದರು.
ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಪತಿ ಗುರುಪ್ರಸಾದ್ ಮತ್ತು ಕುಟುಂಬಸ್ಥರು ಹೆಚ್ಚುವರಿ ಹಣಕ್ಕಾಗಿ ಕೀರ್ತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ.
ಕಳೆದ ಡಿಸೆಂಬರ್ನಲ್ಲಿ ಮನೆ ಕಟ್ಟಿಸುವ ನೆಪದಲ್ಲಿ ಪತಿ ಗುರುಪ್ರಸಾದ್ 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಮಗಳ ಬಾಳು ಹಸನಾಗಲಿ ಎಂಬ ಆಶಯದಿಂದ ಪೋಷಕರು ಈಗಾಗಲೇ 8 ಲಕ್ಷ ರೂಪಾಯಿಯನ್ನು ನೀಡಿದ್ದರು.
ಆದರೂ ಕಿರುಕುಳ ನಿಂತಿರಲಿಲ್ಲ. ಈ ನೋವಿನ ಬಗ್ಗೆ ಕೀರ್ತಿ ಪದೇ ಪದೇ ತನ್ನ ತಾಯಿಯ ಬಳಿ ಅಳಲು ತೋಡಿಕೊಂಡಿದ್ದರು. ವರದಕ್ಷಿಣೆ ಪಿಶಾಚಿಯ ಕಿರುಕುಳ ಮಿತಿಮೀರಿದಾಗ, ಜೀವನದಲ್ಲಿ ಜಿಗುಪ್ಸೆಗೊಂಡ ಕೀರ್ತಿ ನಿನ್ನೆ ಬೆಳಿಗ್ಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.
ಕೀರ್ತಿ ಆತ್ಮಹ*ತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ ಗುರುಪ್ರಸಾದ್, ಪೋಷಕರಿಗೆ ಸತ್ಯ ಮರೆಮಾಚಿ ‘ಕೀರ್ತಿ ತಲೆ ಸುತ್ತಿ ಬಿದ್ದಿದ್ದಾಳೆ, ಆಸ್ಪತ್ರೆಗೆ ಸೇರಿಸಿದ್ದೇವೆ’ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ. ಪೋಷಕರು ಆಸ್ಪತ್ರೆಗೆ ಬಂದು ನೋಡಿದಾಗ ಕೀರ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಆಘಾತಕ್ಕೊಳಗಾದ ಪೋಷಕರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಕೀರ್ತಿಯ ಅಂತ್ಯಕ್ರಿಯೆಯನ್ನು ಮಧುಗಿರಿಯ ಸ್ವಗ್ರಾಮದಲ್ಲಿ ನೆರವೇರಿಸಲು ಪೋಷಕರು ಮೃತದೇಹವನ್ನು ಕೊಂಡೊಯ್ದಿದ್ದಾರೆ.
ಪೊಲೀಸರು ಪತಿ ಗುರುಪ್ರಸಾದ್ ಮತ್ತು ಆತನ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…