Categories: Crime

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಮದುವೆಯಾದ ಕೇವಲ ಎರಡೇ ವರ್ಷಕ್ಕೆ ಕೀರ್ತಿ (24) ಎಂಬ ವಿವಾಹಿತೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾವನ್ನಪ್ಪಿದ್ದಾರೆ.

ಈ ಸಾವು ಕೇವಲ ಆತ್ಮಹ*ತ್ಯೆಯಲ್ಲ, ಇದು ವರದಕ್ಷಿಣೆ ದಾಹಕ್ಕೆ ನಡೆದ ಬಲಿ ಎಂದು ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾದ ಕೀರ್ತಿ ಅವರಿಗೆ 2023ರ ನವೆಂಬರ್‌ನಲ್ಲಿ ಗುರುಪ್ರಸಾದ್ ಎಂಬುವವರೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಪೋಷಕರು ಮಗಳ ಸುಖಜೀವನಕ್ಕಾಗಿ ಸುಮಾರು 35 ಲಕ್ಷ ರೂಪಾಯಿ ಖರ್ಚು ಮಾಡಿ ವಿವಾಹ ನೆರವೇರಿಸಿದ್ದರು.

ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಪತಿ ಗುರುಪ್ರಸಾದ್ ಮತ್ತು ಕುಟುಂಬಸ್ಥರು ಹೆಚ್ಚುವರಿ ಹಣಕ್ಕಾಗಿ ಕೀರ್ತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಮನೆ ಕಟ್ಟಿಸುವ ನೆಪದಲ್ಲಿ ಪತಿ ಗುರುಪ್ರಸಾದ್ 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಮಗಳ ಬಾಳು ಹಸನಾಗಲಿ ಎಂಬ ಆಶಯದಿಂದ ಪೋಷಕರು ಈಗಾಗಲೇ 8 ಲಕ್ಷ ರೂಪಾಯಿಯನ್ನು ನೀಡಿದ್ದರು.

ಆದರೂ ಕಿರುಕುಳ ನಿಂತಿರಲಿಲ್ಲ. ಈ ನೋವಿನ ಬಗ್ಗೆ ಕೀರ್ತಿ ಪದೇ ಪದೇ ತನ್ನ ತಾಯಿಯ ಬಳಿ ಅಳಲು ತೋಡಿಕೊಂಡಿದ್ದರು. ವರದಕ್ಷಿಣೆ ಪಿಶಾಚಿಯ ಕಿರುಕುಳ ಮಿತಿಮೀರಿದಾಗ, ಜೀವನದಲ್ಲಿ ಜಿಗುಪ್ಸೆಗೊಂಡ ಕೀರ್ತಿ ನಿನ್ನೆ ಬೆಳಿಗ್ಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ಕೀರ್ತಿ ಆತ್ಮಹ*ತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ ಗುರುಪ್ರಸಾದ್, ಪೋಷಕರಿಗೆ ಸತ್ಯ ಮರೆಮಾಚಿ ‘ಕೀರ್ತಿ ತಲೆ ಸುತ್ತಿ ಬಿದ್ದಿದ್ದಾಳೆ, ಆಸ್ಪತ್ರೆಗೆ ಸೇರಿಸಿದ್ದೇವೆ’ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ. ಪೋಷಕರು ಆಸ್ಪತ್ರೆಗೆ ಬಂದು ನೋಡಿದಾಗ ಕೀರ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಆಘಾತಕ್ಕೊಳಗಾದ ಪೋಷಕರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಕೀರ್ತಿಯ ಅಂತ್ಯಕ್ರಿಯೆಯನ್ನು ಮಧುಗಿರಿಯ ಸ್ವಗ್ರಾಮದಲ್ಲಿ ನೆರವೇರಿಸಲು ಪೋಷಕರು ಮೃತದೇಹವನ್ನು ಕೊಂಡೊಯ್ದಿದ್ದಾರೆ.

ಪೊಲೀಸರು ಪತಿ ಗುರುಪ್ರಸಾದ್ ಮತ್ತು ಆತನ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

3 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

7 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

11 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

1 day ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

1 day ago