ವರದನಹಳ್ಳಿ ವರದ ಆಂಜನೇಯ ಸ್ವಾಮಿ ದೇಗುಲದ‌ ಜೀರ್ಣೋದ್ಧಾರ

ತಾಲೂಕಿನ ವರದನಹಳ್ಳಿಯ ಶ್ರೀ ವರದ ಅಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ನವೆಂಬರ್ 15 ಮತ್ತು 16 ರಂದು ದೇವಸ್ಥಾನದಲ್ಲಿ ಗಂಗೆಪೂಜೆ, ಹೋಮ, ಕುಂಭಾಬಿಷೇಕ,  ಮಹಾಪ್ರದಕ್ಷಿಣೆ,ಗೋದರ್ಶನ ಸೇರಿದಂತೆ ಹಲವು ಧಾರ್ಮಿಕ ಪೂಜಾವಿಧಾನಗಳನ್ನ ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು.

ಇಲ್ಲಿನ ಆಂಜನೇಯ‌ಸ್ವಾಮಿ ದೇವಸ್ಥಾನಕ್ಕೆ 300ವರ್ಷಗಳ ಇತಿಹಾಸವಿದೆ ಎಂದು ಇಲ್ಲಿನ‌ ಗ್ರಾಮಸ್ಥರು‌ ತಿಳಿಸಿದ್ದಾರೆ. ಮೊದಲು ಅಭಯ ಆಂಜನೇಯಸ್ವಾಮಿ ಎಂದು ಕರೆಯುತ್ತಿದ್ದರು. ಭಕ್ತರು ಬೇಡಿಕೊಳ್ಳವ ವರಗಳನ್ನ ಶೀಘ್ರವಾಗಿ ಈಡೇರಿಸುತ್ತಿರುವುದರಿಂದ ವರದ ಆಂಜನೇಯನಸ್ವಾಮಿ ಎಂದು‌ ಮರುನಾಮಕರಣ ಮಾಡಲಾಗಿದೆ.

ಶ್ರೀ ವರದ ಅಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಏರ್ಪಟ್ಟಿತು.

ಈ ಹಿಂದೆ ದೇವಸ್ಥಾನದ ಮುಂದೆ ಕಲ್ಯಾಣಿ ಇದ್ದು, ಕಲ್ಯಾಣಿಯಲ್ಲಿ ಸದಾ ನೀರು ತುಂಬಿ ತುಳುಕುತ್ತಿತ್ತು. ಕಲ್ಯಾಣಿಯಲ್ಲಿನ ನೀರು ಬಲಗಡೆಯಿಂದ ವೃತ್ತಾಕರದಲ್ಲಿ ತಿರುಗಿದರೆ ಮಳೆಯಾಗುತ್ತಿತ್ತು ಎಂಬ ನಂಬಿಕೆ ಸಹ ಗ್ರಾಮಸ್ಥರಲ್ಲಿ ಇತ್ತು ಎಂದು ಗ್ರಾಮದ ಹಿರಿಯರಾದ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಊರಿನ ಗ್ರಾಮಸ್ಥರೆಲ್ಲಾ ಸೇರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧನ ಸಹಾಯ ನೀಡಿದ್ದಾರೆ, ಗ್ರಾಮದ  ಹನುಮಯ್ಯ. ಅಶ್ವತ್ಥಮ್ಮ, ಬೈರಣ್ಣ ದೇವಸ್ಥಾನದ ಅಭಿವೃದ್ಧಿಗೆ ಭೂದಾನ ಮಾಡಿದ್ದಾರೆ.

ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಹೋಮ, ಯಾಗ, ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗುತ್ತು.

ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ  ಶಾಸಕ ಧೀರಜ್ ಮುನಿರಾಜ್, ಗ್ರಾಮ ಪಂಚಾಯತಿ ಸದಸ್ಯರಾದ ನಾರಾಯಣಸ್ವಾಮಿ, ಭೈರೇಗೌಡರು, ಮಂಜುಳ ಮೂರ್ತಿ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಕಾರ್ಯದರ್ಶಿ ನಾರಾಯಣಸ್ವಾಮಿ. ದೇವಸ್ಥಾನದ ಅಧ್ಯಕ್ಷರಾದ ಆನಂದ್, ಗ್ರಾಮಸ್ಥರಾದ ಉಮಾಭಾರತಿ, ನಿರ್ಮಲ ಸೇರಿದಂತೆಊರಿನ ಗ್ರಾಮಸ್ಥರು ಸೇರಿದಂತೆ ಕುಲ ಬಾಂಧವರು ಹಾಜರಿದ್ದರು

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

4 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

12 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

17 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago