ವರದನಹಳ್ಳಿ ವರದ ಆಂಜನೇಯ ಸ್ವಾಮಿ ದೇಗುಲದ‌ ಜೀರ್ಣೋದ್ಧಾರ

ತಾಲೂಕಿನ ವರದನಹಳ್ಳಿಯ ಶ್ರೀ ವರದ ಅಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ನವೆಂಬರ್ 15 ಮತ್ತು 16 ರಂದು ದೇವಸ್ಥಾನದಲ್ಲಿ ಗಂಗೆಪೂಜೆ, ಹೋಮ, ಕುಂಭಾಬಿಷೇಕ,  ಮಹಾಪ್ರದಕ್ಷಿಣೆ,ಗೋದರ್ಶನ ಸೇರಿದಂತೆ ಹಲವು ಧಾರ್ಮಿಕ ಪೂಜಾವಿಧಾನಗಳನ್ನ ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು.

ಇಲ್ಲಿನ ಆಂಜನೇಯ‌ಸ್ವಾಮಿ ದೇವಸ್ಥಾನಕ್ಕೆ 300ವರ್ಷಗಳ ಇತಿಹಾಸವಿದೆ ಎಂದು ಇಲ್ಲಿನ‌ ಗ್ರಾಮಸ್ಥರು‌ ತಿಳಿಸಿದ್ದಾರೆ. ಮೊದಲು ಅಭಯ ಆಂಜನೇಯಸ್ವಾಮಿ ಎಂದು ಕರೆಯುತ್ತಿದ್ದರು. ಭಕ್ತರು ಬೇಡಿಕೊಳ್ಳವ ವರಗಳನ್ನ ಶೀಘ್ರವಾಗಿ ಈಡೇರಿಸುತ್ತಿರುವುದರಿಂದ ವರದ ಆಂಜನೇಯನಸ್ವಾಮಿ ಎಂದು‌ ಮರುನಾಮಕರಣ ಮಾಡಲಾಗಿದೆ.

ಶ್ರೀ ವರದ ಅಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಏರ್ಪಟ್ಟಿತು.

ಈ ಹಿಂದೆ ದೇವಸ್ಥಾನದ ಮುಂದೆ ಕಲ್ಯಾಣಿ ಇದ್ದು, ಕಲ್ಯಾಣಿಯಲ್ಲಿ ಸದಾ ನೀರು ತುಂಬಿ ತುಳುಕುತ್ತಿತ್ತು. ಕಲ್ಯಾಣಿಯಲ್ಲಿನ ನೀರು ಬಲಗಡೆಯಿಂದ ವೃತ್ತಾಕರದಲ್ಲಿ ತಿರುಗಿದರೆ ಮಳೆಯಾಗುತ್ತಿತ್ತು ಎಂಬ ನಂಬಿಕೆ ಸಹ ಗ್ರಾಮಸ್ಥರಲ್ಲಿ ಇತ್ತು ಎಂದು ಗ್ರಾಮದ ಹಿರಿಯರಾದ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಊರಿನ ಗ್ರಾಮಸ್ಥರೆಲ್ಲಾ ಸೇರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧನ ಸಹಾಯ ನೀಡಿದ್ದಾರೆ, ಗ್ರಾಮದ  ಹನುಮಯ್ಯ. ಅಶ್ವತ್ಥಮ್ಮ, ಬೈರಣ್ಣ ದೇವಸ್ಥಾನದ ಅಭಿವೃದ್ಧಿಗೆ ಭೂದಾನ ಮಾಡಿದ್ದಾರೆ.

ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಹೋಮ, ಯಾಗ, ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗುತ್ತು.

ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ  ಶಾಸಕ ಧೀರಜ್ ಮುನಿರಾಜ್, ಗ್ರಾಮ ಪಂಚಾಯತಿ ಸದಸ್ಯರಾದ ನಾರಾಯಣಸ್ವಾಮಿ, ಭೈರೇಗೌಡರು, ಮಂಜುಳ ಮೂರ್ತಿ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಕಾರ್ಯದರ್ಶಿ ನಾರಾಯಣಸ್ವಾಮಿ. ದೇವಸ್ಥಾನದ ಅಧ್ಯಕ್ಷರಾದ ಆನಂದ್, ಗ್ರಾಮಸ್ಥರಾದ ಉಮಾಭಾರತಿ, ನಿರ್ಮಲ ಸೇರಿದಂತೆಊರಿನ ಗ್ರಾಮಸ್ಥರು ಸೇರಿದಂತೆ ಕುಲ ಬಾಂಧವರು ಹಾಜರಿದ್ದರು

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

14 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

23 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago