Categories: ಲೇಖನ

ವರಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ……

ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು ಎಂದು ಮರೆಯಾಗುತ್ತದೆ. ಮುಂದೆ ಆತ ಮುಟ್ಟಿದ ಹೆಂಡತಿ ಮಕ್ಕಳು, ಕೊನೆಗೆ ತಿನ್ನುವ ಅನ್ನವೂ ಚಿನ್ನವಾಗಿ ಆತ ಹಸಿವಿನಿಂದ ನರಳುವಂತಾಗುತ್ತದೆ…..

ಸದ್ಯದ ನಮ್ಮ ‌ಸ್ಥಿತಿ ಇದನ್ನು ನೆನಪಿಸುತ್ತಿದೆ. ಮೂವತ್ತು ನಲವತ್ತು ವರ್ಷಗಳ ಹಿಂದೆ ಬಹುತೇಕ ನಾವುಗಳು ಅನ್ನಕ್ಕಾಗಿ ಪರಿತಪ್ಪಿಸುತ್ತಿದ್ದೆವು. ಅದೃಷ್ಟವಶಾತ್ ಇಂದು ಊಟ, ವಸತಿ, ಬಟ್ಟೆ ತಕ್ಕಮಟ್ಟಿಗೆ ಎಲ್ಲರಿಗೂ ಇದೆ.‌ ಆದರೆ ದುರಾದೃಷ್ಟವಶಾತ್ ನಮ್ಮಲ್ಲಿ ಬಹುತೇಕರಿಗೆ ಚಿನ್ನವಿದೆ ಅನ್ನವಿಲ್ಲ ಅರ್ಥಾತ್‌ ಅನ್ನವಿದ್ದರು ಅದನ್ನು ಅನುಭವಿಸಿ ಹೊಟ್ಟೆ ತುಂಬ ತಿನ್ನುವ ಯೋಗವಿಲ್ಲ ಕಾರಣ ಅನಾರೋಗ್ಯ….

ಸರಸ್ವತಿಯನ್ನು ( ಜ್ಞಾನವನ್ನು ) ಮರೆತು ಕೇವಲ ಲಕ್ಷ್ಮಿಯ ಹಿಂದೆ ಬಿದ್ದ ಪರಿಣಾಮವಿದು. ಇಪ್ಪತ್ತು ವರ್ಷಗಳ ಹಿಂದೆ ಅಷ್ಟೇನು ಮಹತ್ವ ಪಡೆಯದ ವರ ಮಹಾಲಕ್ಷ್ಮಿ ಹಬ್ಬ ಇಂದು ಬಹಳಷ್ಟು ಮಧ್ಯಮ ವರ್ಗದವರು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲು ಕಾರಣ ಹಣ ಮತ್ತು ಸಂಪತ್ತಿನ ಬಗೆಗಿನ ಅತಿಯಾದ ಮೋಹ ಮತ್ತು ಮಾಧ್ಯಮಗಳ ಜ್ಯೋತಿಷಿಗಳು ಸೃಷ್ಟಿಸಿರುವ ಉತ್ಪ್ರೇಕ್ಷಿತ ಭ್ರಮಾಲೋಕ…..

ವರಮಹಾಲಕ್ಷ್ಮಿ ಹಬ್ಬದ ಆಚರಣೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ತಿಳಿಯುವುದೇನೆಂದರೆ, ಭಕ್ತಿಗಿಂತ ಹೆಚ್ಚಾಗಿ ಆಸೆಗಳೇ ಮೇಲುಗೈ ಪಡೆದಿವೆ.‌ ಅದರೊಳಗಿನ ಒಳ್ಳೆಯ ಮೌಲ್ಯಗಳು ಕಾಣೆಯಾಗಿವೆ. ಒಳಗೆ ಅಪ್ರಾಮಾಣಿಕತನ ತುಂಬಿಕೊಂಡು ಲಕ್ಷ್ಮೀ ರೂಪದ ಹಣ, ಒಡವೆ, ಅಲಂಕಾರಗಳನ್ನು ಪೂಜಿಸಿದರೆ ಫಲವೇನು. ಇದು ಆತ್ಮವಂಚನೆಯಾಗುವುದಿಲ್ಲವೇ…..

ಕಾಯಕವೇ ಕೈಲಾಸ ತತ್ವದ ವಿರುದ್ಧ ದಿಕ್ಕಿನಲ್ಲಿ ಹಣ ಮಾಡುವ ತಂತ್ರಗಾರಿಕೆಗೆ ನಾವುಗಳು ಶರಣಾಗಿದ್ದೇವೆ. ಅನಾರೋಗ್ಯ, ಆತ್ಮಹತ್ಯೆ, ಅಪಘಾತ, ಅಪರಾಧ ಎಂಬ ಸಾವುಗಳು ಒತ್ತಡದ ಬದುಕಿನ ಪರಿಣಾಮ ನಮ್ಮನ್ನು ಆವರಿಸಿವೆ…..

ಆದ್ದರಿಂದ ಈ ವರ ಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಒಂದಷ್ಟು ಆತ್ಮಾವಲೋಕನದ ಅವಶ್ಯಕತೆ ಇದೆ.
” ಸಾಕು ಎಂಬುವವನು ಶ್ರೀಮಂತ – ಬೇಕು ಎಂಬುವವನು ಬಡವ ” ಎಂಬ ನುಡಿ ಮಾತಿನ ನಿಜವಾದ ಒಳ ಅರ್ಥವನ್ನು ಅರಿತುಕೊಂಡು ಅದನ್ನು ಅಳವಡಿಸಿಕೊಳ್ಳಬೇಕಿದೆ…….

ಸಂಪ್ರದಾಯ ಮತ್ತು ಆಚರಣೆಗಳಲ್ಲಿ ಒಂದಿಷ್ಟು ಮೌಢ್ಯ ತುಂಬಿದ್ದರು ಹಬ್ಬಗಳು ನಮ್ಮ ಸಮಾಜದ
ಬಹುಮುಖ್ಯ ಸಂಭ್ರಮಗಳು.
ಸ್ವಲ್ಪ ಹಿಂದಿನವರೆಗೂ ಹಬ್ಬಗಳು ರುಚಿಯಾದ ಊಟ ಮತ್ತು ಹೊಸ ಬಟ್ಟೆಗಳಿಗೆ ಆಕರ್ಷಕ ಸಮಯವಾಗಿತ್ತು. ಆದರೆ ಆಧುನಿಕತೆಯ ಭರದಲ್ಲಿ ಅದು ಇಂದು ಶಿಥಿಲವಾಗಿ ತನ್ನ ಪ್ರಾಮುಖ್ಯತೆ ಕಳೆದುಕೊಳ್ಳುವ ಹಂತದಲ್ಲಿವೆ. ಕೇವಲ ಕಾಟಾಚಾರದ, ತೋರಿಕೆಯ ಪ್ರದರ್ಶನವಾಗಿದೆ…….

ಎಲ್ಲದರಲ್ಲಿಯೂ ಬದಲಾವಣೆಗಳಾಗುತ್ತಿರುವ ಈ ಕಾಲ ಘಟ್ಟದಲ್ಲಿ ಹಬ್ಬಗಳಲ್ಲಿಯೂ ಒಂದಷ್ಟು ಆಧುನಿಕತೆಯ ಆಚರಣೆಗಳನ್ನು ಅಳವಡಿಸಿಕೊಂಡರೆ ನಿಜಕ್ಕೂ ಮತ್ತೆ ಅದು ತನ್ನ ನಿಜ ಅರ್ಥದ ಸಂತೋಷ ಸಂಭ್ರಮಗಳ ಕೂಟಗಳಾಗಿ ಮಾರ್ಪಡಬಹುದು…….

ಬಹುತೇಕರಲ್ಲಿ ಈಗ ಊಟ ಬಟ್ಟೆಗಳ ಸಂಭ್ರಮ ಅಷ್ಟಾಗಿ ಉಳಿದಿಲ್ಲ. ಎಲ್ಲಾ ರೀತಿಯ ಊಟ ಬಟ್ಟೆಗಳು ಎಲ್ಲಾ ಸಂದರ್ಭದಲ್ಲಿಯೂ ಲಭ್ಯವಿದೆ. ಅದಕ್ಕಾಗಿ ಹಬ್ಬಗಳಿಗಾಗಿ ಕಾಯುವ ಸ್ಥಿತಿ ಇಲ್ಲ. ಆದರೆ ನಿಜವಾಗಿ ಕಾಣೆಯಾಗಿರುವುದು ಸ್ನೇಹ, ಪ್ರೀತಿ, ವಿಶ್ವಾಸ , ಆತ್ಮೀಯ ವಾತಾವರಣ ಮತ್ತು ಮಾನವೀಯ ಮೌಲ್ಯಗಳು.
ಅದನ್ನು ಪುನರ್ ಸ್ಥಾಪಿಸಲು ಹಬ್ಬಗಳನ್ನು ವೇದಿಕೆ ಮಾಡಿಕೊಳ್ಳಬಹುದು……

ಹೇಗೆ ವಿವಿಧ ಕಾರಣಗಳಿಗಾಗಿ
ಆಧುನಿಕ ಪಾರ್ಟಿಗಳನ್ನು ಆಯೋಜಿಸಲಾಗುತ್ತದೋ ಹಾಗೆ ಹಬ್ಬಗಳನ್ನು ಆತ್ಮೀಯರ, ಗೆಳೆಯರ, ಬಂಧುಗಳ ಸ್ನೇಹಕೂಟಗಳಾಗಿ ಮಾರ್ಪಡಿಸಿ ಮನಸ್ಸಿಗೆ ಮುದ ನೀಡುವಂತೆ ಮಾಡಿಕೊಳ್ಳಬಹುದು…..

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆ ದಿನ ಹಿರಿಯರೊಂದಿಗೆ ಚಿಂತನ – ಮಂಥನ, ಮಕ್ಕಳಿಗೆ ಒಂದಷ್ಟು ಆಟಗಳು, ಭವಿಷ್ಯದ ಯೋಜನೆಗಳನ್ನು ಮನೆಯ ಒಳಗೇ ಚರ್ಚಿಸುವ ಒಂದು ವೇದಿಕೆ ಸೃಷ್ಟಿಸಬಹುದು……

ಅಲ್ಲದೆ ಆರ್ಥಿಕವಾಗಿ ತೀರಾ ಕೆಳಸ್ತರದ, ಹಬ್ಬದ ಊಟಕ್ಕೆ ಆಸೆಪಡುವ ಒಂದಷ್ಟು ನಮ್ಮ ಸುತ್ತಮುತ್ತಲ ಬಡವರಿಗೆ ಒಳ್ಳೆಯ ಹಬ್ಬದೂಟ ಹಾಕುವ ಸ್ವಯಂ ತೃಪ್ತಿಯ ಕೆಲಸವನ್ನು ಮಾಡಬಹುದು. ಆಗ ಹಬ್ಬಗಳ ಮಹತ್ವ ಹೆಚ್ಚಾಗಿ ಆತ್ಮತೃಪ್ತಿಯ ಜೊತೆಗೆ ಮುಂದಿನ ಹಬ್ಬಕ್ಕೆ ಕಾಯುವ ಸಂತಸ ಉಳಿಯುತ್ತದೆ…….

ಇಲ್ಲದಿದ್ದರೆ ಹಬ್ಬಗಳು ಒಣ ಆಚರಣೆಗಳಿಂದ ತಮ್ಮ ಪ್ರಾಮುಖ್ಯತೆ ಕಳೆದುಕೊಳ್ಳಬಹುದು.
ಟಿವಿ ಜ್ಯೋತಿಷಿಗಳ ಎಡಬಿಡಂಗಿತನದಿಂದ ತೀರಾ ಜೊಳ್ಳಾಗಬಹುದು ಮತ್ತು ಕುಟುಂಬ ವ್ಯವಸ್ಥೆ ಒಂದು ವ್ಯಾಪಾರಿ ಸಂಸ್ಥೆಯಾಗಿ ಬದಲಾಗಬಹುದು…..

ಇದು ಅವರವರ ಅನುಕೂಲಗಳನ್ನು ಅವಲಂಭಿಸಿರುತ್ತದೆ. ನನ್ನ ಆಶಯ ಮತ್ತು ಅನಿಸಿಕೆ ಅಷ್ಟೆ…….

ಎಲ್ಲರಿಗೂ ಹಬ್ಬದ ಶುಭಾಶಯಗಳು…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

2 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

14 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

16 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

19 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

20 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

21 hours ago