ವರಮಹಾಲಕ್ಷ್ಮಿ ಹಬ್ಬ: ಹಣ್ಣು, ತರಕಾರಿ, ಹೂ, ಇತರೆ ವಸ್ತುಗಳಿಗೆ ದುಬಾರಿ ಬೆಲೆ: ಗಗನಕ್ಕೇರಿದ ದರಗಳ ನಡುವೆ ವರಮಹಾಲಕ್ಷ್ಮೀ ಹಬ್ಬಕ್ಕೆ ಅದ್ಧೂರಿ ಸ್ವಾಗತ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಬಾರಿ ತಡವಾಗಿಯಾದರೂ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಹೂಗಳ ಇಳುವರಿ ಮೇಲೆ ಪ್ರಭಾವ ಬೀರಿದೆ.

ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ ಹೂವು, ಹಣ್ಣು ಹಾಗೂ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.

ತರಕಾರಿ, ಹಣ್ಣುಗಳು ಹಾಗೂ ಹೂಗಳ ಬೆಲೆ ಹಬ್ಬಕ್ಕೆಂದೇ ದುಬಾರಿಯಾಗಿ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಇದರೊಂದಿಗೆ ವರಲಕ್ಷ್ಮೀ ಮೂರ್ತಿಗಳ ಪ್ರತಿಮೆಗಳು, ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ದುಬಾರಿ ಬೆಲೆಯೆನಿಸಿವೆ.

ನಗರದ ಮಾರ್ಕೆಟ್ ‌ನಲ್ಲಿ ಹಣ್ಣುಗಳ ನೂರಾರು ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ದೊಡ್ಡ ತೆಂಗಿನ ಕಾಯಿ ಒಂದಕ್ಕೆ 100 ರೂ ಆಗಿದೆ. ಹೂವು, ಹಣ್ಣಿನ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿವೆ. ಕಾಕಡ, ಮಲ್ಲಿಗೆ , ಮಳ್ಳೆ ಹೂವಿನ ಬೆಲೆ 1000 ರೂ, ಕನಕಾಂಬರ ಕೆ.ಜಿಗೆ 2000 ರೂ ಇದ್ದು, 50 ಗ್ರಾಂಗೆ 120ರೂನಂತೆ ಮಾರಾಟವಾಗುತ್ತಿತ್ತು. ಶಾಮಂತಿಗೆ 250ರೂ, ಬಟನ್ಸ್, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರವರೆಗೂ ಇವೆ. ಇನ್ನು ತಾವರೆ ಹೂ ಜೊತೆಗೆ 80 ರೂ, ಡೇರಾ ಒಂದು ಹೂವಿಗೆ 10 ರೂ ಇದರೊಂದಿಗೆ ಸೇಬಿನ ಬೆಲೆ 250ರೂ, ದ್ರಾಕ್ಷಿ 200ರೂ ದಾಟಿದ್ದು, ಮಿಕ್ಕ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಅಲಂಕಾರಿಕ ಹೂಗಳು ಒಂದು ಕುಚ್ಚಿಗೆ 200 ರೂಗಳಂತೆ ಮಾರಾಟವಾಗುತ್ತಿತ್ತು.

 ಬಾಳೆಕಂದುಗಳು ಸಹ ತುಸು ಬೆಲೆ ಹೆಚ್ಚಾಗಿಯೇ ಇವೆ.  ಆಷಾಢ ಮಾಸದಲ್ಲಿಯೂ ಸಹ ಹೂವುಗಳ ಬೆಲೆ ಅಷ್ಟೇನೂ ಇಳಿಕೆಯಾಗಿರಲಿಲ್ಲ.

ಕಡಿಮೆಯಾದ ಹೂ ಇಳುವರಿ:

ತಾಲೂಕಿನಲ್ಲಿ ಸೇವಂತಿಗೆ, ಗುಲಾಬಿ, ಚೆಂಡು ಹೂಗಳು ಹೆಚ್ಚಾಗಿ ಬೆಳೆಯುತ್ತಿವೆ. ಆದರೆ ಕಾಕಡ, ಮಲ್ಲಿಗೆ, ಕನಕಾಂಬರ ಹೂಗಳನ್ನು ಬೆಳೆಯುವವರೇ ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಬೇರೆಡೆಯಿಂದ ಹೂಗಳನ್ನು ತರಿಸಬೇಕಾದ ಅನಿವಾರ್ಯತೆ ಇದೆ. ಹೂ ಕೀಳಲು ಕೂಲಿ ಕಾರ್ಮಿಕರ ಸಮಸ್ಯೆ, ನಿರ್ವಹಣೆ ವೆಚ್ಚ ಹೂ ಬೆಳೆಗಾರರ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ, ಬೆಂಗಳೂರಿನ ಮಾರುಕಟ್ಟೆಯಲ್ಲಿಯೂ ಹೂಗಳ ಬೆಲೆ ದುಬಾರಿಯಾಗಿದೆ  ಎನ್ನುತ್ತಾರೆ ಹೂ ಮಾರಾಟಗಾರ ಗಂಗಾಧರ್.

ಲಕ್ಷ್ಮೀ ಅಲಂಕೃತ ಮೂರ್ತಿಗಳು :

ವರಮಹಾಲಕ್ಷ್ಮೀ ಹಬ್ಬ ಹದಿನೈದು ದಿನವಿದ್ದಂತೆ ವಿವಿಧ ಮಳಿಗೆಗಳಲ್ಲಿ ಲಕ್ಷ್ಮೀ ಅಲಂಕೃತ ಮೂರ್ತಿಗಳು ಹಾಗೂ ಲಕ್ಷ್ಮೀ ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಒಂದು ಸೆಟ್ ಪೂರ್ಣ ಪ್ರತಿಮೆಗೆ 3 ಸಾವಿರದಿಂದ 10 ಸಾವಿರದವರೆಗೆ ಮಾರಾಟವಾಗುತ್ತಿದೆ. ಈ ಬಾರಿ ಹೆಚ್ಚಿನ ಮೂರ್ತಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.ಲಕ್ಷ್ಮೀ ಕಳಸಕ್ಕೆ ಇಡುವ ಲಕ್ಷ್ಮೀ ಮುಖವಾಡಗಳನ್ನು ಮಹಿಳೆಯರು ಕೊಂಡೊಯ್ಯುತ್ತಿದ್ದುದು ಸಾಮಾನ್ಯವಾಗಿತ್ತು. ಪ್ಲಾಸ್ಟಿಕ್ ಹೂಗಳು, ಅಲಂಕಾರಿಕ ಸಾಮಗ್ರಿಗಳ ಮಾರಾಟ ಸಹ ಭರದಿಂದ ಸಾಗಿತ್ತು.

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

59 minutes ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

1 hour ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

14 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

16 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

16 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago