ವರಮಹಾಲಕ್ಷ್ಮಿ ಹಬ್ಬ: ಹಣ್ಣು, ತರಕಾರಿ, ಹೂ, ಇತರೆ ವಸ್ತುಗಳಿಗೆ ದುಬಾರಿ ಬೆಲೆ: ಗಗನಕ್ಕೇರಿದ ದರಗಳ ನಡುವೆ ವರಮಹಾಲಕ್ಷ್ಮೀ ಹಬ್ಬಕ್ಕೆ ಅದ್ಧೂರಿ ಸ್ವಾಗತ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಬಾರಿ ತಡವಾಗಿಯಾದರೂ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಹೂಗಳ ಇಳುವರಿ ಮೇಲೆ ಪ್ರಭಾವ ಬೀರಿದೆ.

ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ ಹೂವು, ಹಣ್ಣು ಹಾಗೂ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.

ತರಕಾರಿ, ಹಣ್ಣುಗಳು ಹಾಗೂ ಹೂಗಳ ಬೆಲೆ ಹಬ್ಬಕ್ಕೆಂದೇ ದುಬಾರಿಯಾಗಿ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಇದರೊಂದಿಗೆ ವರಲಕ್ಷ್ಮೀ ಮೂರ್ತಿಗಳ ಪ್ರತಿಮೆಗಳು, ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ದುಬಾರಿ ಬೆಲೆಯೆನಿಸಿವೆ.

ನಗರದ ಮಾರ್ಕೆಟ್ ‌ನಲ್ಲಿ ಹಣ್ಣುಗಳ ನೂರಾರು ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ದೊಡ್ಡ ತೆಂಗಿನ ಕಾಯಿ ಒಂದಕ್ಕೆ 100 ರೂ ಆಗಿದೆ. ಹೂವು, ಹಣ್ಣಿನ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿವೆ. ಕಾಕಡ, ಮಲ್ಲಿಗೆ , ಮಳ್ಳೆ ಹೂವಿನ ಬೆಲೆ 1000 ರೂ, ಕನಕಾಂಬರ ಕೆ.ಜಿಗೆ 2000 ರೂ ಇದ್ದು, 50 ಗ್ರಾಂಗೆ 120ರೂನಂತೆ ಮಾರಾಟವಾಗುತ್ತಿತ್ತು. ಶಾಮಂತಿಗೆ 250ರೂ, ಬಟನ್ಸ್, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರವರೆಗೂ ಇವೆ. ಇನ್ನು ತಾವರೆ ಹೂ ಜೊತೆಗೆ 80 ರೂ, ಡೇರಾ ಒಂದು ಹೂವಿಗೆ 10 ರೂ ಇದರೊಂದಿಗೆ ಸೇಬಿನ ಬೆಲೆ 250ರೂ, ದ್ರಾಕ್ಷಿ 200ರೂ ದಾಟಿದ್ದು, ಮಿಕ್ಕ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಅಲಂಕಾರಿಕ ಹೂಗಳು ಒಂದು ಕುಚ್ಚಿಗೆ 200 ರೂಗಳಂತೆ ಮಾರಾಟವಾಗುತ್ತಿತ್ತು.

 ಬಾಳೆಕಂದುಗಳು ಸಹ ತುಸು ಬೆಲೆ ಹೆಚ್ಚಾಗಿಯೇ ಇವೆ.  ಆಷಾಢ ಮಾಸದಲ್ಲಿಯೂ ಸಹ ಹೂವುಗಳ ಬೆಲೆ ಅಷ್ಟೇನೂ ಇಳಿಕೆಯಾಗಿರಲಿಲ್ಲ.

ಕಡಿಮೆಯಾದ ಹೂ ಇಳುವರಿ:

ತಾಲೂಕಿನಲ್ಲಿ ಸೇವಂತಿಗೆ, ಗುಲಾಬಿ, ಚೆಂಡು ಹೂಗಳು ಹೆಚ್ಚಾಗಿ ಬೆಳೆಯುತ್ತಿವೆ. ಆದರೆ ಕಾಕಡ, ಮಲ್ಲಿಗೆ, ಕನಕಾಂಬರ ಹೂಗಳನ್ನು ಬೆಳೆಯುವವರೇ ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಬೇರೆಡೆಯಿಂದ ಹೂಗಳನ್ನು ತರಿಸಬೇಕಾದ ಅನಿವಾರ್ಯತೆ ಇದೆ. ಹೂ ಕೀಳಲು ಕೂಲಿ ಕಾರ್ಮಿಕರ ಸಮಸ್ಯೆ, ನಿರ್ವಹಣೆ ವೆಚ್ಚ ಹೂ ಬೆಳೆಗಾರರ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ, ಬೆಂಗಳೂರಿನ ಮಾರುಕಟ್ಟೆಯಲ್ಲಿಯೂ ಹೂಗಳ ಬೆಲೆ ದುಬಾರಿಯಾಗಿದೆ  ಎನ್ನುತ್ತಾರೆ ಹೂ ಮಾರಾಟಗಾರ ಗಂಗಾಧರ್.

ಲಕ್ಷ್ಮೀ ಅಲಂಕೃತ ಮೂರ್ತಿಗಳು :

ವರಮಹಾಲಕ್ಷ್ಮೀ ಹಬ್ಬ ಹದಿನೈದು ದಿನವಿದ್ದಂತೆ ವಿವಿಧ ಮಳಿಗೆಗಳಲ್ಲಿ ಲಕ್ಷ್ಮೀ ಅಲಂಕೃತ ಮೂರ್ತಿಗಳು ಹಾಗೂ ಲಕ್ಷ್ಮೀ ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಒಂದು ಸೆಟ್ ಪೂರ್ಣ ಪ್ರತಿಮೆಗೆ 3 ಸಾವಿರದಿಂದ 10 ಸಾವಿರದವರೆಗೆ ಮಾರಾಟವಾಗುತ್ತಿದೆ. ಈ ಬಾರಿ ಹೆಚ್ಚಿನ ಮೂರ್ತಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.ಲಕ್ಷ್ಮೀ ಕಳಸಕ್ಕೆ ಇಡುವ ಲಕ್ಷ್ಮೀ ಮುಖವಾಡಗಳನ್ನು ಮಹಿಳೆಯರು ಕೊಂಡೊಯ್ಯುತ್ತಿದ್ದುದು ಸಾಮಾನ್ಯವಾಗಿತ್ತು. ಪ್ಲಾಸ್ಟಿಕ್ ಹೂಗಳು, ಅಲಂಕಾರಿಕ ಸಾಮಗ್ರಿಗಳ ಮಾರಾಟ ಸಹ ಭರದಿಂದ ಸಾಗಿತ್ತು.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

4 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

5 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

9 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

16 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

18 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago