ವರಮಹಾಲಕ್ಷ್ಮಿ ಹಬ್ಬ: ಹಣ್ಣು, ತರಕಾರಿ, ಹೂ, ಇತರೆ ವಸ್ತುಗಳಿಗೆ ದುಬಾರಿ ಬೆಲೆ: ಗಗನಕ್ಕೇರಿದ ದರಗಳ ನಡುವೆ ವರಮಹಾಲಕ್ಷ್ಮೀ ಹಬ್ಬಕ್ಕೆ ಅದ್ಧೂರಿ ಸ್ವಾಗತ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಬಾರಿ ತಡವಾಗಿಯಾದರೂ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಹೂಗಳ ಇಳುವರಿ ಮೇಲೆ ಪ್ರಭಾವ ಬೀರಿದೆ.

ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ ಹೂವು, ಹಣ್ಣು ಹಾಗೂ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.

ತರಕಾರಿ, ಹಣ್ಣುಗಳು ಹಾಗೂ ಹೂಗಳ ಬೆಲೆ ಹಬ್ಬಕ್ಕೆಂದೇ ದುಬಾರಿಯಾಗಿ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಇದರೊಂದಿಗೆ ವರಲಕ್ಷ್ಮೀ ಮೂರ್ತಿಗಳ ಪ್ರತಿಮೆಗಳು, ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ದುಬಾರಿ ಬೆಲೆಯೆನಿಸಿವೆ.

ನಗರದ ಮಾರ್ಕೆಟ್ ‌ನಲ್ಲಿ ಹಣ್ಣುಗಳ ನೂರಾರು ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ದೊಡ್ಡ ತೆಂಗಿನ ಕಾಯಿ ಒಂದಕ್ಕೆ 100 ರೂ ಆಗಿದೆ. ಹೂವು, ಹಣ್ಣಿನ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿವೆ. ಕಾಕಡ, ಮಲ್ಲಿಗೆ , ಮಳ್ಳೆ ಹೂವಿನ ಬೆಲೆ 1000 ರೂ, ಕನಕಾಂಬರ ಕೆ.ಜಿಗೆ 2000 ರೂ ಇದ್ದು, 50 ಗ್ರಾಂಗೆ 120ರೂನಂತೆ ಮಾರಾಟವಾಗುತ್ತಿತ್ತು. ಶಾಮಂತಿಗೆ 250ರೂ, ಬಟನ್ಸ್, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರವರೆಗೂ ಇವೆ. ಇನ್ನು ತಾವರೆ ಹೂ ಜೊತೆಗೆ 80 ರೂ, ಡೇರಾ ಒಂದು ಹೂವಿಗೆ 10 ರೂ ಇದರೊಂದಿಗೆ ಸೇಬಿನ ಬೆಲೆ 250ರೂ, ದ್ರಾಕ್ಷಿ 200ರೂ ದಾಟಿದ್ದು, ಮಿಕ್ಕ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಅಲಂಕಾರಿಕ ಹೂಗಳು ಒಂದು ಕುಚ್ಚಿಗೆ 200 ರೂಗಳಂತೆ ಮಾರಾಟವಾಗುತ್ತಿತ್ತು.

 ಬಾಳೆಕಂದುಗಳು ಸಹ ತುಸು ಬೆಲೆ ಹೆಚ್ಚಾಗಿಯೇ ಇವೆ.  ಆಷಾಢ ಮಾಸದಲ್ಲಿಯೂ ಸಹ ಹೂವುಗಳ ಬೆಲೆ ಅಷ್ಟೇನೂ ಇಳಿಕೆಯಾಗಿರಲಿಲ್ಲ.

ಕಡಿಮೆಯಾದ ಹೂ ಇಳುವರಿ:

ತಾಲೂಕಿನಲ್ಲಿ ಸೇವಂತಿಗೆ, ಗುಲಾಬಿ, ಚೆಂಡು ಹೂಗಳು ಹೆಚ್ಚಾಗಿ ಬೆಳೆಯುತ್ತಿವೆ. ಆದರೆ ಕಾಕಡ, ಮಲ್ಲಿಗೆ, ಕನಕಾಂಬರ ಹೂಗಳನ್ನು ಬೆಳೆಯುವವರೇ ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಬೇರೆಡೆಯಿಂದ ಹೂಗಳನ್ನು ತರಿಸಬೇಕಾದ ಅನಿವಾರ್ಯತೆ ಇದೆ. ಹೂ ಕೀಳಲು ಕೂಲಿ ಕಾರ್ಮಿಕರ ಸಮಸ್ಯೆ, ನಿರ್ವಹಣೆ ವೆಚ್ಚ ಹೂ ಬೆಳೆಗಾರರ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ, ಬೆಂಗಳೂರಿನ ಮಾರುಕಟ್ಟೆಯಲ್ಲಿಯೂ ಹೂಗಳ ಬೆಲೆ ದುಬಾರಿಯಾಗಿದೆ  ಎನ್ನುತ್ತಾರೆ ಹೂ ಮಾರಾಟಗಾರ ಗಂಗಾಧರ್.

ಲಕ್ಷ್ಮೀ ಅಲಂಕೃತ ಮೂರ್ತಿಗಳು :

ವರಮಹಾಲಕ್ಷ್ಮೀ ಹಬ್ಬ ಹದಿನೈದು ದಿನವಿದ್ದಂತೆ ವಿವಿಧ ಮಳಿಗೆಗಳಲ್ಲಿ ಲಕ್ಷ್ಮೀ ಅಲಂಕೃತ ಮೂರ್ತಿಗಳು ಹಾಗೂ ಲಕ್ಷ್ಮೀ ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಒಂದು ಸೆಟ್ ಪೂರ್ಣ ಪ್ರತಿಮೆಗೆ 3 ಸಾವಿರದಿಂದ 10 ಸಾವಿರದವರೆಗೆ ಮಾರಾಟವಾಗುತ್ತಿದೆ. ಈ ಬಾರಿ ಹೆಚ್ಚಿನ ಮೂರ್ತಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.ಲಕ್ಷ್ಮೀ ಕಳಸಕ್ಕೆ ಇಡುವ ಲಕ್ಷ್ಮೀ ಮುಖವಾಡಗಳನ್ನು ಮಹಿಳೆಯರು ಕೊಂಡೊಯ್ಯುತ್ತಿದ್ದುದು ಸಾಮಾನ್ಯವಾಗಿತ್ತು. ಪ್ಲಾಸ್ಟಿಕ್ ಹೂಗಳು, ಅಲಂಕಾರಿಕ ಸಾಮಗ್ರಿಗಳ ಮಾರಾಟ ಸಹ ಭರದಿಂದ ಸಾಗಿತ್ತು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago