ವರಮಹಾಲಕ್ಷ್ಮಿ ಹಬ್ಬ: ಹಣ್ಣು, ತರಕಾರಿ, ಹೂ, ಇತರೆ ವಸ್ತುಗಳಿಗೆ ದುಬಾರಿ ಬೆಲೆ: ಗಗನಕ್ಕೇರಿದ ದರಗಳ ನಡುವೆ ವರಮಹಾಲಕ್ಷ್ಮೀ ಹಬ್ಬಕ್ಕೆ ಅದ್ಧೂರಿ ಸ್ವಾಗತ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಬಾರಿ ತಡವಾಗಿಯಾದರೂ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಹೂಗಳ ಇಳುವರಿ ಮೇಲೆ ಪ್ರಭಾವ ಬೀರಿದೆ.

ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ ಹೂವು, ಹಣ್ಣು ಹಾಗೂ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.

ತರಕಾರಿ, ಹಣ್ಣುಗಳು ಹಾಗೂ ಹೂಗಳ ಬೆಲೆ ಹಬ್ಬಕ್ಕೆಂದೇ ದುಬಾರಿಯಾಗಿ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಇದರೊಂದಿಗೆ ವರಲಕ್ಷ್ಮೀ ಮೂರ್ತಿಗಳ ಪ್ರತಿಮೆಗಳು, ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ದುಬಾರಿ ಬೆಲೆಯೆನಿಸಿವೆ.

ನಗರದ ಮಾರ್ಕೆಟ್ ‌ನಲ್ಲಿ ಹಣ್ಣುಗಳ ನೂರಾರು ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ದೊಡ್ಡ ತೆಂಗಿನ ಕಾಯಿ ಒಂದಕ್ಕೆ 100 ರೂ ಆಗಿದೆ. ಹೂವು, ಹಣ್ಣಿನ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿವೆ. ಕಾಕಡ, ಮಲ್ಲಿಗೆ , ಮಳ್ಳೆ ಹೂವಿನ ಬೆಲೆ 1000 ರೂ, ಕನಕಾಂಬರ ಕೆ.ಜಿಗೆ 2000 ರೂ ಇದ್ದು, 50 ಗ್ರಾಂಗೆ 120ರೂನಂತೆ ಮಾರಾಟವಾಗುತ್ತಿತ್ತು. ಶಾಮಂತಿಗೆ 250ರೂ, ಬಟನ್ಸ್, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರವರೆಗೂ ಇವೆ. ಇನ್ನು ತಾವರೆ ಹೂ ಜೊತೆಗೆ 80 ರೂ, ಡೇರಾ ಒಂದು ಹೂವಿಗೆ 10 ರೂ ಇದರೊಂದಿಗೆ ಸೇಬಿನ ಬೆಲೆ 250ರೂ, ದ್ರಾಕ್ಷಿ 200ರೂ ದಾಟಿದ್ದು, ಮಿಕ್ಕ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಅಲಂಕಾರಿಕ ಹೂಗಳು ಒಂದು ಕುಚ್ಚಿಗೆ 200 ರೂಗಳಂತೆ ಮಾರಾಟವಾಗುತ್ತಿತ್ತು.

 ಬಾಳೆಕಂದುಗಳು ಸಹ ತುಸು ಬೆಲೆ ಹೆಚ್ಚಾಗಿಯೇ ಇವೆ.  ಆಷಾಢ ಮಾಸದಲ್ಲಿಯೂ ಸಹ ಹೂವುಗಳ ಬೆಲೆ ಅಷ್ಟೇನೂ ಇಳಿಕೆಯಾಗಿರಲಿಲ್ಲ.

ಕಡಿಮೆಯಾದ ಹೂ ಇಳುವರಿ:

ತಾಲೂಕಿನಲ್ಲಿ ಸೇವಂತಿಗೆ, ಗುಲಾಬಿ, ಚೆಂಡು ಹೂಗಳು ಹೆಚ್ಚಾಗಿ ಬೆಳೆಯುತ್ತಿವೆ. ಆದರೆ ಕಾಕಡ, ಮಲ್ಲಿಗೆ, ಕನಕಾಂಬರ ಹೂಗಳನ್ನು ಬೆಳೆಯುವವರೇ ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಬೇರೆಡೆಯಿಂದ ಹೂಗಳನ್ನು ತರಿಸಬೇಕಾದ ಅನಿವಾರ್ಯತೆ ಇದೆ. ಹೂ ಕೀಳಲು ಕೂಲಿ ಕಾರ್ಮಿಕರ ಸಮಸ್ಯೆ, ನಿರ್ವಹಣೆ ವೆಚ್ಚ ಹೂ ಬೆಳೆಗಾರರ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ, ಬೆಂಗಳೂರಿನ ಮಾರುಕಟ್ಟೆಯಲ್ಲಿಯೂ ಹೂಗಳ ಬೆಲೆ ದುಬಾರಿಯಾಗಿದೆ  ಎನ್ನುತ್ತಾರೆ ಹೂ ಮಾರಾಟಗಾರ ಗಂಗಾಧರ್.

ಲಕ್ಷ್ಮೀ ಅಲಂಕೃತ ಮೂರ್ತಿಗಳು :

ವರಮಹಾಲಕ್ಷ್ಮೀ ಹಬ್ಬ ಹದಿನೈದು ದಿನವಿದ್ದಂತೆ ವಿವಿಧ ಮಳಿಗೆಗಳಲ್ಲಿ ಲಕ್ಷ್ಮೀ ಅಲಂಕೃತ ಮೂರ್ತಿಗಳು ಹಾಗೂ ಲಕ್ಷ್ಮೀ ಮುಖವಾಡಗಳು ಸಹ ಭರದಿಂದ ಮಾರಾಟವಾಗುತ್ತಿದ್ದು, ಒಂದು ಸೆಟ್ ಪೂರ್ಣ ಪ್ರತಿಮೆಗೆ 3 ಸಾವಿರದಿಂದ 10 ಸಾವಿರದವರೆಗೆ ಮಾರಾಟವಾಗುತ್ತಿದೆ. ಈ ಬಾರಿ ಹೆಚ್ಚಿನ ಮೂರ್ತಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.ಲಕ್ಷ್ಮೀ ಕಳಸಕ್ಕೆ ಇಡುವ ಲಕ್ಷ್ಮೀ ಮುಖವಾಡಗಳನ್ನು ಮಹಿಳೆಯರು ಕೊಂಡೊಯ್ಯುತ್ತಿದ್ದುದು ಸಾಮಾನ್ಯವಾಗಿತ್ತು. ಪ್ಲಾಸ್ಟಿಕ್ ಹೂಗಳು, ಅಲಂಕಾರಿಕ ಸಾಮಗ್ರಿಗಳ ಮಾರಾಟ ಸಹ ಭರದಿಂದ ಸಾಗಿತ್ತು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago