
ವರಮಹಾಲಕ್ಷ್ಮೀ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ-ಹೊಸಹಳ್ಳಿ ಕೆರೆಯಲ್ಲಿ ನಡೆದಿದೆ.
ಗೋವೇನಹಳ್ಳಿಯ ಮರಿಗಂಗಯ್ಯ (45) ಮೃತ ವ್ಯಕ್ತಿ.
ಮೃತದೇಹ ಹುಡುಕಿ ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು, ಸ್ಥಳೀಯರ ನೆರವು ಪಡೆದು ಅಂತಿಮವಾಗಿ ಮೃತ ದೇಹ ಹೊರತೆಗಿದಿದ್ದಾರೆ.
ಬಿಲ್ಲಿನಕೋಟೆ ಗ್ರಾಮದ ಈಜು ಪಟು ಸಿದ್ದಲಿಂಗಯ್ಯ ಎಂಬುವರ ಸಹಕಾರದಿಂದ ಶವ ಪತ್ತೆಯಾಯಿತು. ನೆಲಮಂಗಲ ಅಗ್ನಿಶಾಮಕ ಠಾಣೆ ಎಲ್ಲಾ ಪರಿಕರಗಳಿಂದ ಸಶಕ್ತವಾಗಬೇಕು, ತುಮಕೂರು ಅಗ್ನಿ ಶಾಮಕ ಠಾಣೆಯನ್ನು ಅವಲಂಬಿಸುವುದನ್ನು ಬಿಡಬೇಕು, ರ್ದುಘಟನೆಗಳಾದಾಗ ಸೂಕ್ತ ಪರಿಕರಗಳಿಂದ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.