ವರಮಹಾಲಕ್ಷ್ಮೀ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ-ಹೊಸಹಳ್ಳಿ ಕೆರೆಯಲ್ಲಿ ನಡೆದಿದೆ.
ಗೋವೇನಹಳ್ಳಿಯ ಮರಿಗಂಗಯ್ಯ (45) ಮೃತ ವ್ಯಕ್ತಿ.
ಮೃತದೇಹ ಹುಡುಕಿ ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು, ಸ್ಥಳೀಯರ ನೆರವು ಪಡೆದು ಅಂತಿಮವಾಗಿ ಮೃತ ದೇಹ ಹೊರತೆಗಿದಿದ್ದಾರೆ.
ಬಿಲ್ಲಿನಕೋಟೆ ಗ್ರಾಮದ ಈಜು ಪಟು ಸಿದ್ದಲಿಂಗಯ್ಯ ಎಂಬುವರ ಸಹಕಾರದಿಂದ ಶವ ಪತ್ತೆಯಾಯಿತು. ನೆಲಮಂಗಲ ಅಗ್ನಿಶಾಮಕ ಠಾಣೆ ಎಲ್ಲಾ ಪರಿಕರಗಳಿಂದ ಸಶಕ್ತವಾಗಬೇಕು, ತುಮಕೂರು ಅಗ್ನಿ ಶಾಮಕ ಠಾಣೆಯನ್ನು ಅವಲಂಬಿಸುವುದನ್ನು ಬಿಡಬೇಕು, ರ್ದುಘಟನೆಗಳಾದಾಗ ಸೂಕ್ತ ಪರಿಕರಗಳಿಂದ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…