ವರಮಹಾಲಕ್ಷ್ಮೀ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ-ಹೊಸಹಳ್ಳಿ ಕೆರೆಯಲ್ಲಿ ನಡೆದಿದೆ.
ಗೋವೇನಹಳ್ಳಿಯ ಮರಿಗಂಗಯ್ಯ (45) ಮೃತ ವ್ಯಕ್ತಿ.
ಮೃತದೇಹ ಹುಡುಕಿ ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು, ಸ್ಥಳೀಯರ ನೆರವು ಪಡೆದು ಅಂತಿಮವಾಗಿ ಮೃತ ದೇಹ ಹೊರತೆಗಿದಿದ್ದಾರೆ.
ಬಿಲ್ಲಿನಕೋಟೆ ಗ್ರಾಮದ ಈಜು ಪಟು ಸಿದ್ದಲಿಂಗಯ್ಯ ಎಂಬುವರ ಸಹಕಾರದಿಂದ ಶವ ಪತ್ತೆಯಾಯಿತು. ನೆಲಮಂಗಲ ಅಗ್ನಿಶಾಮಕ ಠಾಣೆ ಎಲ್ಲಾ ಪರಿಕರಗಳಿಂದ ಸಶಕ್ತವಾಗಬೇಕು, ತುಮಕೂರು ಅಗ್ನಿ ಶಾಮಕ ಠಾಣೆಯನ್ನು ಅವಲಂಬಿಸುವುದನ್ನು ಬಿಡಬೇಕು, ರ್ದುಘಟನೆಗಳಾದಾಗ ಸೂಕ್ತ ಪರಿಕರಗಳಿಂದ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…