ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.
ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.
ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…