ವರುಣನ ಕೃಪೆಯಿಂದ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್

ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.

ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.

ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮಂದಿಪ್ ಸಿಂಗ್ (2) ಗಳಿಸಿದ್ದಾಗ ವೇಗದ ಬೌಲರ್ ಅಶ೯ದೀಪ್ ಸಿಂಗ್ ಅವರಿಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಅಂಕುಲ್ ರಾಯ್ (4) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರು.

ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ವರುಣನ ಆರ್ಭಟದಿಂದಾಗಿ ಪಂದ್ಯವನ್ನು ಮುಂದುವರಿಸಲು ಅಂಪೈರ್ ಗಳು ನಿರಾಕರಿಸಿದಾಗ ಡಕ್ವಥ್೯ ಲೂಯಿಸ್ ನಿಯಮದ ಪ್ರಕಾರ ಕಿಂಗ್ಸ್ ಇಲೆವೆನ್ ಪಂಜಾಬ್ 7 ರನ್ ಗೆಲುವು ಪಡೆದರು, ಪಂಜಾಬ್ ಪರವಾಗಿ ಅಶ೯ದೀಪ್ ಸಿಂಗ್ 3 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

4 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

15 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

23 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago