ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.
ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.
ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…