ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.
ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.
ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…