ಕೋಲಾರ: ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷ ಎಂಟು ತಿಂಗಳಿಂದ ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಯಾದ ಜಯಶಂಕರ್ ಅವರನ್ನು ನಗರದ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಮಂಗಳವಾರ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಳ್ಕೊಡಿಗೆ ಮೂಲಕ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಯಶಂಕರ್, ಸಾರಿಗೆ ಇಲಾಖೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ತನ್ನಷ್ಟಕ್ಕೇ ತಾನೇ ಸಮಸ್ಯೆಗಳು ದೂರವಾಗುತ್ತವೆ ಎಂಬುದಕ್ಕೆ ಕೋಲಾರ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೇ ಉದಾಹರಣೆಯಾಗಿದೆ. ರಾಜ್ಯ ಸರಕಾರದ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಜಿಲ್ಲೆಯಲ್ಲಿ ನಿರ್ವಹಿಸಿದ್ದಾರೆ. ಸಿಬ್ಬಂದಿಯಿಂದ ಕೆಲಸವನ್ನು ತೆಗೆದುಕೊಂಡು ಸಮಸ್ಯೆ ಇಲ್ಲದ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇವೆ. ಜಿಲ್ಲೆಯ ಜನರ ಪ್ರೀತಿ, ಗೌರವ, ಸಂತೋಷ ಇನ್ನಷ್ಟು ನಮಗೆ ಕೆಲಸವನ್ನು ಮಾಡಲು ಪೇರಣೆಯಾಗಿದೆ. ಮುಂದೆ ಅವಕಾಶ ಸಿಕ್ಕರೆ ಮತ್ತೆ ಕೋಲಾರದಲ್ಲಿ ನಿಮ್ಮೊಂದಿಗೆ ಕೆಲಸ ಮಾಡೋಣ ಎಂದು ತನ್ನ ಕೆಲಸದ ಅನುಭವವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಮೇಶ್(ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ಅಧಿಕಾರಿಗಳಾದ ರಾಮಮೂರ್ತಿ, ಗೋವಿಂದಪ್ಪ, ಶ್ಯಾಮೇಗೌಡ, ಶ್ರೀನಿವಾಸಗೌಡ, ಶಿವಪ್ಪ, ರಾಹುಲ್, ಸುಬ್ರಮಣಿ, ನಾರಾಯಣಸ್ವಾಮಿ, ಗೋಪಾಲಗೌಡ, ಪ್ರಸಾದ್, ಬಾಲಕೃಷ್ಣ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು…
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…