Categories: ಕೋಲಾರ

ವರ್ಗಾವಣೆಯಾದ ಕೆಎಸ್ಆರ್‌ಟಿಸಿ ಸಂಚಾರಿ ನಿಯಂತ್ರಣಾಧಿಕಾರಿ ಜಯಶಂಕರ್ ಗೆ ಬೀಳ್ಕೊಡಿಗೆ

ಕೋಲಾರ: ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷ ಎಂಟು ತಿಂಗಳಿಂದ ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಯಾದ ಜಯಶಂಕರ್ ಅವರನ್ನು ನಗರದ ಕೆಎಸ್ಆರ್‌ಟಿಸಿ ನಿಲ್ದಾಣದಲ್ಲಿ ಮಂಗಳವಾರ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಳ್ಕೊಡಿಗೆ ಮೂಲಕ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಯಶಂಕರ್, ಸಾರಿಗೆ ಇಲಾಖೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ತನ್ನಷ್ಟಕ್ಕೇ ತಾನೇ ಸಮಸ್ಯೆಗಳು ದೂರವಾಗುತ್ತವೆ ಎಂಬುದಕ್ಕೆ ಕೋಲಾರ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೇ ಉದಾಹರಣೆಯಾಗಿದೆ. ರಾಜ್ಯ ಸರಕಾರದ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಜಿಲ್ಲೆಯಲ್ಲಿ ನಿರ್ವಹಿಸಿದ್ದಾರೆ. ಸಿಬ್ಬಂದಿಯಿಂದ ಕೆಲಸವನ್ನು ತೆಗೆದುಕೊಂಡು ಸಮಸ್ಯೆ ಇಲ್ಲದ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇವೆ. ಜಿಲ್ಲೆಯ ಜನರ ಪ್ರೀತಿ, ಗೌರವ, ಸಂತೋಷ ಇನ್ನಷ್ಟು ನಮಗೆ ಕೆಲಸವನ್ನು ಮಾಡಲು ಪೇರಣೆಯಾಗಿದೆ. ಮುಂದೆ ಅವಕಾಶ ಸಿಕ್ಕರೆ ಮತ್ತೆ ಕೋಲಾರದಲ್ಲಿ ನಿಮ್ಮೊಂದಿಗೆ ಕೆಲಸ ಮಾಡೋಣ ಎಂದು ತನ್ನ ಕೆಲಸದ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಬಸ್ ನಿಲ್ದಾಣಾಧಿಕಾರಿ ಕೆ.ವಿ ಶಿವಕುಮಾರ್, ಡಯಟ್ ಶಿಕ್ಷಣ ಅಧಿಕಾರಿ ಸಿ.ಆರ್ ಅಶೋಕ್, ಸಂಚಾರಿ ನಿಯಂತ್ರಣಾಧಿಕಾರಿಗಳಾದ ರಮೇಶ್(ದೇವೇಗೌಡ), ಹೆಚ್.ಎಂ ಶ್ರೀನಿವಾಸಮೂರ್ತಿ, ಶ್ರೀನಿವಾಸ್, ಅಧಿಕಾರಿಗಳಾದ ರಾಮಮೂರ್ತಿ, ಗೋವಿಂದಪ್ಪ, ಶ್ಯಾಮೇಗೌಡ, ಶ್ರೀನಿವಾಸಗೌಡ, ಶಿವಪ್ಪ, ರಾಹುಲ್, ಸುಬ್ರಮಣಿ, ನಾರಾಯಣಸ್ವಾಮಿ, ಗೋಪಾಲಗೌಡ, ಪ್ರಸಾದ್, ಬಾಲಕೃಷ್ಣ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

3 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

14 hours ago